August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಗ್ಗಿ ಹೇಳುವಾಗ ತಪ್ಪಿತ್ತೆಂದು ವಿದ್ಯಾರ್ಥಿಗೆ ಹೊಡೆದ ಶಿಕ್ಷಕ – ಪಾಪೆಮಜಲು ಸರಕಾರಿ ಶಾಲೆಯಲ್ಲಿ ಘಟನೆ

ಪುತ್ತೂರು : 8ನೇ ತರಗತಿ ವಿದ್ಯಾರ್ಥಿ ಮಗ್ಗಿ ಹೇಳುವಾಗ ತಪ್ಪಿತ್ತೆಂದು ವಿದ್ಯಾರ್ಥಿಗೆ ಶಿಕ್ಷಕರೋರ್ವರು ಹೊಡೆದು ವಿದ್ಯಾರ್ಥಿಯ ಎಡ ಕೈ ಮೂಳೆಗೆ ಗಾಯವಾದ ಘಟನೆ ಪಾಪೆಮಜಲು ಸರಕಾರಿ ಶಾಲೆಯಲ್ಲಿ ನಡೆದಿದೆ.

ಶಾಲೆಯಲ್ಲಿ ಗಣಿತ ಶಿಕ್ಷಕರ ಮುಂದೆ ವಿದ್ಯಾರ್ಥಿ ಮಗ್ಗಿ ಹೇಳುವಾಗ ತಪ್ಪಿದ್ದಕ್ಕೆ ಅವರು ಬೆತ್ತದಿಂದ ಹೊಡೆದಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ವಿದ್ಯಾರ್ಥಿ ಮನೆಯಲ್ಲಿ ತಾಯಿ ಮತ್ತು ಅಜ್ಜ ರವರಲ್ಲಿ ಈ ವಿಚಾರ ತಿಳಿಸಿ ಕೈ ನೋವು ಆಗುತ್ತಿರುವುದಾಗಿ ಹೇಳಿದ್ದರು. ಬಳಿಕ ಅಜ್ಜರವರು ಮೊಮ್ಮಗನನ್ನು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಕೈ ಮೂಳೆಗೆ ಬಲವಾದ ಪೆಟ್ಟು ಬಿದ್ದಿರುವುದರಿಂದ ಕೈ ಊನಗೊಂಡಿದೆ ಎಂದು ತಿಳಿದುಬಂದಿದೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page