May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಲೆನ್ಸಿಯಾದ ಮಹಿಳಾ ಮತ್ತು ಮಕ್ಕಳ ಅಭಿವೃಧಿ ಇಲಾಖೆಯಲ್ಲಿ ವಿಕಲಚೇತನರ ಬಗ್ಗೆ ಅರಿವು ಮೂಡಿಸಲು ಅಂಗನವಾಡಿ ಶಿಕ್ಷಕಿಯರಿಗೆ ಕಾರ್ಯಗಾರ

ಮಂಗಳೂರು : ವಲೆನ್ಸಿಯಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವೆರೋನಿಕಾ ವಿಹಾರ್ ಘಟಕ, ಕಾರ್ಮೆಲ್ ಸೇವಾ ಟ್ರಸ್ಟ್ ಮಂಗಳೂರು ವತಿಯಿಂದ ಸುರತ್ಕಲ್, ಕಾವೂರು, ಕುಲ್ಶೆಕರ ಹೀಗೆ ಮೂರು ವಲಯದಿಂದ 70 ಮಂದಿ ಅಂಗನವಾಡಿ ಶಿಕ್ಷಕಿಯರಿಗೆ ವಿಕಲಚೇತನರ ಬಗ್ಗೆ ಅರಿವು ಮೂಡಿಸುವ ಕಾರ್ಯಗಾರವು ನಡೆಯಿತು.

ಸೈಂಟ್ ಆಗ್ನೆಸ್ ಇನ್ಸಿಟ್ಯೂಟ್ ಫೊರ್ ಸ್ಪೆಷಲ್ ಎಡ್ಯುಕೇಶನ್ ಸಂಸ್ಥೆಯ ಶಿಕ್ಷಕಿಯರಾದ ಶಾಂತಿ, ಪಾಯಲ್ ಹಾಗೂ ಫಾತಿಮಾ ಹಮಿಶಾ ಈ ಕಾರ್ಯಗಾರವನ್ನು ನಡೆಸಿಕೊಟ್ಟರು. ಕಾರ್ಮೆಲ್ ಸೇವಾ ಟ್ರಸ್ಟ್ ಇದರ ಪ್ರೊಜೆಕ್ಟ್ ಮ್ಯಾನೇಜರ್ ಹಾಗೂ ಸಂಯೋಜಕಿ ಸಿಸ್ಟರ್ ಫ್ರೀಡಾರವರು ಎಲ್ಲರನ್ನೂ ಸ್ವಾಗತಿಸಿ, ಆಗಮಿಸಿದ ಎಲ್ಲಾ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಲ್ಲಿ ಒಬ್ಬರಾದ ಫಾತಿಮಾರವರು, ಅಂಗವಿಕಲತೆ ಎಂದರೇನು? ಅಂಗವಿಕಲತೆಯ ವಿಧಗಳ್ಯಾವುವು? ಇದರ ಕಾರಣಗಳೇನು? ಎನ್ನುವುದರ ಕುರಿತು ಅವರ ವಿಕಲಚೇತನ ಮಗುವಿನ ಲಾಲನೆ ಪೋಷಣೆ ಮಾಡಿ ಅವರ ಕಾಲಿನ ಮೇಲೆ ನಿಲ್ಲಲು ಸಹಕರಿಸಿದ ಬಗ್ಗೆ ಅವರ ಅನಿಸಿಕೆಗಳು ಮತ್ತು ಹೇಗೆ ಇದನ್ನು ತಡೆಗಟ್ಟಬಹುದು ಎಂಬುವುದರ ಬಗ್ಗೆ ಜಾಗೃತಿ ಮೂಡಿಸಿದರು. ಸಂಸ್ಥೆಯ ಸದಸ್ಯೆ ಪ್ರೀಯಾ ಎಲ್ಲರನ್ನೂ ವಂದಿಸಿದರು.

 

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page