August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

3 ಸಾವಿರ ರೂಪಾಯಿ ಲಂಚ ಸ್ವೀಕಾರ – ಸಂಚಾರ ಠಾಣಾ ಇನ್ಸ್‌ಪೆಕ್ಟರ್ ಷರೀಫ್ ಹಾಗೂ ಸಿಬ್ಬಂದಿ ಪ್ರವೀಣ್ ಲೋಕಾಯುಕ್ತ ಬಲೆಗೆ

ಮಂಗಳೂರು: ಠಾಣೆಯಿಂದ ಸ್ಕೂಟ‌ರ್ ಬಿಡುಗಡೆಗೊಳಿಸಲು 3 ಸಾವಿರ ರೂಪಾಯಿ ಲಂಚ ಪಡೆದ ಹಿನ್ನಲೆಯಲ್ಲಿ ನಗರದ ಉತ್ತರ ಸಂಚಾರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಹಾಗೂ ಸಿಬ್ಬಂದಿ ಪ್ರವೀಣ್‌ ನಾಯ್ಕನನ್ನು ಲೋಕಾಯುಕ್ತ ಪೊಲೀಸರು ಜನವರಿ 27ರಂದು ಸೋಮವಾರ ಬಂಧಿಸಿದ್ದಾರೆ.

ಪೊಲೀಸರ ವಶದಲ್ಲಿದ್ದ ಸ್ಕೂಟರ್‌ ಬಿಡುಗಡೆಗೊಳಿಸಲು ನ್ಯಾಯಾಲಯವು ಆದೇಶ ಮಾಡಿತ್ತು. ಈ ಸಲುವಾಗಿ ದೂರುದಾರರು ಠಾಣೆಯ ಇನ್‌ಸ್ಪೆಕ್ಟ‌ರ್ ಮಹಮ್ಮದ್ ಷರೀಫ್ ಅವರನ್ನು ಭೇಟಿ ಮಾಡಿದ್ದರು. ಸ್ಕೂಟ‌ರ್ ಬಿಡುಗಡೆಗೊಳಿಸಲು 5 ಸಾವಿರ ರೂಪಾಯಿ ಲಂಚ ನೀಡುವಂತೆ ಷರೀಫ್‌ ಬೇಡಿಕೆ ಇಟ್ಟಿದ್ದರು. ಮೊತ್ತವನ್ನು ಕಡಿಮೆ ಮಾಡುವಂತೆ ಕೋರಿದಾಗ ಠಾಣಾ ಬರಹಗಾರರಾದ ನಾಗರತ್ನ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಆಕೆಯ ಬಳಿ ಹೋದಾಗ, ಅವಾಚ್ಯವಾಗಿ ಬೈದು 3 ಸಾವಿರ ರೂಪಾಯಿ ಲಂಚ ನೀಡುವಂತೆ ಹೇಳಿದ್ದರು.

ಲಂಚ ನೀಡಲು ಮನಸ್ಸಿಲ್ಲದ ಕಾರಣ ದೂರುದಾರರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎಂದು ಲೋಕಾಯುಕ್ತ ಪೊಲೀಸರರು ತಿಳಿಸಿದ್ದಾರೆ. ‘ದೂರುದಾರ ವ್ಯಕ್ತಿಯಿಂದ ರೂಪಾಯಿ 3 ಸಾವಿರವನ್ನು ಪಡೆದ ತಕ್ಷಣ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ’ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ (ಪ್ರಭಾರ) ನಂದಿನಿ ಬಿ.ಎನ್., ಡಿವೈಎಸ್‌ಪಿ ಗಾನ ಪಿ. ಕುಮಾ‌ರ್, ಇನ್‌ಸ್ಪೆಕ್ಟ‌ರ್ ಅಮಾನುಲ್ಲಾ ಎ., ಚಂದ್ರಶೇಖರ್ ಕೆ.ಎನ್‌. ಮತ್ತು ಉಡುಪಿ ಠಾಣೆಯ ಇನ್‌ಸ್ಪೆಕ್ಟರ್ ಮಂಜುನಾಥ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page