May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಳ್ಳನನ್ನು ಹಿಡಿದು ವಿಟ್ಲ ಪೊಲೀಸ್ ಠಾಣೆಗೆ ಒಪ್ಪಿಸಿದ ಅನಂತಾಡಿ ಗ್ರಾಮಸ್ಥರು

ಬಂಟ್ವಾಳ: ಜನವರಿ 30ರಂದು ರಾತ್ರಿ 11 ಗಂಟೆಗೆ ಬಂಟ್ಟಾಳ ತಾಲೂಕಿನ ಅನಂತಾಡಿ ಗ್ರಾಮದ ಡೊಡ್ಡಮನೆ ಎಂಬಲ್ಲಿಗೆ ಕಳ್ಳನೊಬ್ಬ ಪ್ರವೇಶಿಸಲು ಹೊಂಚುಹಾಕುತ್ತಿದ್ದ ಸಮಯದಲ್ಲಿ, ಆತನನ್ನು ಗ್ರಾಮಸ್ಥರು ಹಿಡಿದು ವಿಟ್ಲ ಪೋಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಬಹು ಪುರಾತನವೂ ಕಾರಣಿಕ ಕ್ಷೇತ್ರವೂ ಆದ ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಬೆಳ್ಳಿಯ ಮುಖವಾಡ, ಬಂಗಾರದ ಮುಖವಾಡದಂತಹ ಆಭರಣ, ಹಲವಾರು ಬಂಗಾರ, ಬೆಳ್ಳಿಯ ಆಭರಣಗಳು ಅಲ್ಲಿದ್ದವು.

ಹಲವಾರು ದಿನಗಳಿಂದ ಅನಂತಾಡಿ ಹಾಗೂ ನೆಟ್ಲಮುಡ್ನೂರು ಗ್ರಾಮದಲ್ಲಿ ಕಳ್ಳರು ಸಂಚರಿಸುತ್ತಿದ್ದಾರೆ ಎಂಬ ಮಾಹಿತಿ ಇದ್ದು ಗ್ರಾಮಸ್ಥರು ಎಚ್ಚರಿಕೆಯಿಂದ ಇದ್ದರು. ವಿಟ್ಲ ಪೋಲೀಸರು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page