May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ಕುಲಶೇಖರದ ಪ್ರತಿಭಾನ್ವಿತ ಯುವ ಗಾಯಕಿ ರೀಷಲ್ ಮೆಲ್ಬಾ ಕ್ರಾಸ್ತಾ ಇವರಿಗೆ ‘ಸೂಪರ್ ಸಿಂಗರ್ 5’ ರಲ್ಲಿ ಪ್ರಥಮ ಸ್ಥಾನ

ರೂಪಾಯಿ ಒಂದು ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ

ಬೆಂಗಳೂರಿನ ಗೋಪಾಲನ್ ಮಾಲ್ ಇವರು ಜನವರಿ 26ರಂದು ಬೆಂಗಳೂರಿನಲ್ಲಿ ಆಯೋಜಿಸಿದ ‘ಸೂಪರ್ ಸಿಂಗರ್ 5’ ಇದರಲ್ಲಿ ಮಂಗಳೂರಿನ ಕುಲಶೇಖರದ ಪ್ರತಿಭಾನ್ವಿತ ಯುವ ಗಾಯಕಿ ರೀಷಲ್ ಮೆಲ್ಬಾ ಕ್ರಾಸ್ತಾ ಇವರು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಇವರು ರೂಪಾಯಿ ಒಂದು ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಅಶ್ವಿನಿ ಪುನೀತ್ ರಾಜ್ ಕುಮಾರ್, ಝೀ ಕನ್ನಡ ಹಾಗೂ ಸಂಗೀತ ದಿಗ್ಗಜರ  ಸಮ್ಮುಖದಲ್ಲಿ ಈ ಸನ್ಮಾನ ನೀಡಲಾಗಿದೆ. ಮಂಗಳೂರಿನ ಪ್ರಖ್ಯಾತ ಗಾಯಕ ರೋನಿ ಕ್ರಾಸ್ತಾ ಹಾಗೂ ಮೆಟಿಲ್ಡಾ ಕ್ರಾಸ್ತಾ ದಂಪತಿಗಳ ಮಗಳಾದ ಇವರು ಪ್ರಸ್ತುತ ಸೈಂಟ್ ಎಲೋಶಿಯಸ್ ಕಾಲೇಜ್ ಮಂಗಳೂರು ಇಲ್ಲಿ ಪ್ರಥಮ ಪಿಯುಸಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರತಿನಿಧಿಸಿದ ಇವರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಮುಂದಿನ ಎಲ್ಲಾ ಸಂಗೀತ ಕಾರ್ಯಕ್ರಮಗಳಲ್ಲಿ ವಿಜೇತೆಯಾಗಿ ಹೊರಹೊಮ್ಮಲಿ ಎಂದು ಸಂಗೀತ ಪ್ರೇಮಿಗಳು ಶುಭ ಹಾರೈಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page