September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯತ್ ಉಪಾಧ್ಯಕ್ಷ

ಎಂಟು ಲಕ್ಷಕ್ಕೆ ಬೇಡಿಕೆ – ಒಂದು ಲಕ್ಷ ಎಡ್ವಾನ್ಸ್

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ.

ರೂಪಾಯಿ 1 ಲಕ್ಷ ಪಡೆಯುವಾಗ ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ ಅರಸ್ ಎಂಬುವವನು ಲಂಚ ತೆಗೆದುಕೊಂಡ ಹಣದ ಜೊತೆ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ.

ಮನೋಹರ್ ಅರಸ್, ಮಾಗನೂರು ಗ್ರಾಮದ ನಿವಾಸಿ ಶಂಕರ್ ಅವರ ಬಳಿ 8 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ದೂರುದಾರ ಹಾಗೂ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ್ ನಡುವಿನ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶ ಮಾಡದಿರಲು 8 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.

ಅಂತೆಯೇ 1ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಮನೋಹರ್ ಅರಸ್ ಲಂಚ ತೆಗೆದುಕೊಂಡ ಹಣದ ಜೊತೆ ಬಿದ್ದಿದ್ದಾನೆ. ಸದ್ಯ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ್ ನನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

You may also like

News

32 ವರ್ಷಗಳ ಜನಸೇವೆ ಸಾರ್ಥಕ – ಗ್ರೆಟ್ಟಾ ಮಸ್ಕರೇನಸ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಸುದೀರ್ಘ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಗ್ರಾಮ ಆಡಳಿತಾಧಿಕಾರಿ ಗ್ರೆಟ್ಟಾ ಐರಿನ್ ಮಸ್ಕರೇನಸ್ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ ಆತ್ಮೀಯ
News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ

You cannot copy content of this page