September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೆರಾರ್ಡ್ ಟವರ್ಸ್ ರವರ ಏಕಾಂಗಿ ಪ್ರತಿಭಟನೆಗೆ ಕಣ್ಣುಗಳನ್ನು ತೆರೆದ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು

ಧರೆಗುರುಳಿಸಿದ ಕದ್ರಿ ಶಿವಭಾಗ್ ನಲ್ಲಿರುವ ಒಣ ಮರ

ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ಗಿಟ್ಟಿಸಿಕೊಂಡ ಸಾಮಾಜಿಕ ಕಾರ್ಯಕರ್ತ

ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಶಿವಭಾಗ್ ಬಸ್ ಸ್ಟ್ಯಾಂಡ್ ಬಳಿ ಇದ್ದ ಒಣ ಮರವನ್ನು ತೆಗೆಯಲು ಹಲವು ರೀತಿಯಿಂದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗದೇ ಇರುವುದನ್ನು ಗಮನಿಸಿ, ಸಾರ್ವಜನಿಕರಿಗೆ ಈ ಒಣ ಮರದಿಂದ ಆಗುವ ಅನಾಹುತಗಳನ್ನು ತಪ್ಪಿಸಲು ಸಾಮಾಜಿಕ ಕಾರ್ಯಕರ್ತ ಜೆರಾರ್ಡ್ ಟವರ್ಸ್ ಇದೇ ಜನವರಿ 28ರಂದು ವಿನೂತನ ರೀತಿಯಲ್ಲಿ ಏಕಾಂಗಿಯಾಗಿ ಪ್ರತಿಭಟನೆಯನ್ನು ಮಾಡಿ ‘ಒಣಗಿದ ಮರ ಕಡಿಯಿರಿ ಜನರ ಪ್ರಾಣ ರಕ್ಷಿಸಿ’ ಎಂದು ಮಾಧ್ಯಮಗಳ ಮುಖಾಂತರ ಬೀಸಿದ ಚಾಟಿಗೆ ಇಂದು ಫೆಬ್ರವರಿ 6ರಂದು ಗುರುವಾರ ಒಣಗಿದ ಮರವನ್ನು ಕಡಿದು ಧರೆಗುರುಳಿಸುವ ಮುಖಾಂತರ ಯಶಸ್ವಿಯನ್ನು ಕಂಡಿದ್ದಾರೆ.

ಜೆರಾರ್ಡ್ ಟವರ್ಸ್ ರವರ ಈ ಏಕಾಂಗಿ ಪ್ರತಿಭಟನೆಗೆ ಮತ್ತು ಸಿಕ್ಕ ಯಶಸ್ಸಿಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಂದ ಸೋಶಿಯಲ್ ಮೀಡಿಯಾ ಮುಖಾಂತರ ವ್ಯಾಪಕ ಪ್ರಶಂಸೆಗಳು ಹರಿದು ಬರುತ್ತಿವೆ.

You may also like

News

32 ವರ್ಷಗಳ ಜನಸೇವೆ ಸಾರ್ಥಕ – ಗ್ರೆಟ್ಟಾ ಮಸ್ಕರೇನಸ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಸುದೀರ್ಘ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಗ್ರಾಮ ಆಡಳಿತಾಧಿಕಾರಿ ಗ್ರೆಟ್ಟಾ ಐರಿನ್ ಮಸ್ಕರೇನಸ್ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ ಆತ್ಮೀಯ
News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ

You cannot copy content of this page