May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆರೋಗ್ಯಕರ ಜೀವನಕ್ಕೆ ಸಂಗೀತ ಕಲೆ ಪೂರಕ – ಕೃಷ್ಣಾ ಜೆ. ಪಾಲೆಮಾರ್

ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಸಮಾರಂಭ


ಮಂಗಳೂರು: ಆರೋಗ್ಯಕರ ಜೀವನಕ್ಕೆ ಸಂಗೀತ ಕಲೆ ಪೂರಕವಾಗಿದೆ ಎಂದು ಮಾಜಿ ಸಚಿವ ಕಷ್ಣ ಜೆ. ಪಾಲೆಮಾರ್ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ಹಮ್ಮಿಕೊಂಡ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತ ಉತ್ಸವದಲ್ಲಿ ಕಲಾವಿದರನ್ನು ಸನ್ಮಾನಿಸಿ ಮಾತನಾಡಿದರು.


ಯುವ ಪೀಳಿಗೆಯಲ್ಲಿ ಸಂಗೀತದ ಬಗ್ಗೆ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ಸ್ವರ ಸಾನಿಧ್ಯ ರಾಷ್ಟ್ರೀಯ ಸಂಗೀತೋತ್ಸವ ಗಮನಾರ್ಹವಾಗಿದೆ. ಸಂಗೀತಕ್ಕೆ ಅದ್ಭುತವಾದ ಶಕ್ತಿಯಿದೆ. ಪಶು ಪಕ್ಷಿಗಳು, ಗಿಡಗಳು ಸಂಗೀತಕ್ಕೆ ಸ್ಪಂಧಿಸುತ್ತವೆ ಎನ್ನುವುದನ್ನು ಕೇಳಿದ್ದೇನೆ. ಮನುಷ್ಯನ ಆರೋಗ್ಯದ ಮೇಲೂ ಸಂಗೀತ ಕೇಳುವುದರಿಂದ ಉತ್ತಮ ಪರಿಣಾಮ ಬೀರುತ್ತದೆ. ಸಂಗೀತದ ಬಗ್ಗೆ ಸಮಾಜದಲ್ಲಿ ಅದರಲ್ಲೂ ಯುವ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸವಾಗಲಿ ಎಂದು ಶುಭ ಹಾರೈಸಿದರು.


ಸಮಾರಂಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಉದ್ಯಮಿ ಪುಷ್ಪರಾಜ್ ಜೈನ್, ಐಡಿಯಲ್ ಐಸ್ ಕ್ರೀಮ್ ಆಡಳಿತ ನಿರ್ದೇಶಕ ಮುಕುಂದ ಕಾಮತ್, ಸ್ವಸ್ತಿಕ್ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ನ ಅಧ್ಯಕ್ಷ ರಾಘವೇಂದ್ರ ಹೊಳ್ಳ, ಮೈಸೂರು ಎಲೆಕ್ಟ್ರಿಕಲ್ ಕಂಪೆನಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಜ್ಯೋತಿಷಿ ಅಶ್ವಿನ್ ಶರ್ಮಾ, ಓಶಿಯನ್ ಪರ್ಲ್ ಸಂಸ್ಥೆಯ ಉಪಾಧ್ಯಕ್ಷ ಗಿರೀಶ್, ನಗರ ಉಪ ಪೊಲೀಸ್ ಆಯುಕ್ತ ರವಿಶಂಕರ್, ಕಲಾಸಾಧನ ಸಂಸ್ಥೆಯ ನಿರ್ದೇಶಕಿ ವಿಭಾ ಶ್ರೀನಿವಾಸ ನಾಯಕ್, ಅಶ್ವಿನ್ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು. ಶ್ರೀನಿವಾಸ ನಾಯಕ್ ಸ್ವಾಗತಿಸಿದರು. ಭಾಸ್ಕರ್ ರೈ ಕಟ್ಟ ವಂದಿಸಿದರು. ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಕೊಲ್ಕತ್ತಾದ ಅರಣ್ಯ ಚೌಧರಿಯವರಿಂದ ಸಂತೂರ್ ವಾದನ ಮತ್ತು ಕೊಲ್ಕತ್ತಾದ ಪಿಂಟೂದಾಸ್ ಇವರ ತಬಲಾಸಾಥ್ ನೊಂದಿಗೆ ಹಿಂದೂಸ್ತಾನಿ ಕಚೇರಿ ನಡೆಯಿತು. ಧಾರಾವಾಡ ಜಿಲ್ಲೆಯ ಮಾನ್ವಿ ತಾಲೂಕಿನ ಬಸವರಾ ವಂದಲಿ ಮತ್ತು ಸಂಗಡಿಗರು ಹಿಂದೂಸ್ತಾನಿ ಸಂಗೀತ ಕಚೇರಿ ನಡೆಸಿಕೊಟ್ಟರು. ಹೇಮಂತ್ ಭಾಗ್ ವತ್ ಹಾರ್ಮೋನಿಯಂ ಮತ್ತು ವಿಘ್ನೇಶ್ ಪ್ರಭು ತಬಲಾ ಸಾಥ್ ನೀಡಿದರು. ಮೇದಾ ಜಿ. ಭಟ್, ಹಾರ್ಮೋನಿಯಂ, ಅನ್ವೇಷಾ ನಾಯಕ್ ಮತ್ತು ಶ್ರುತಿ ಪ್ರಭು ತಾನ್ಪೂರ ವಾದನದಲ್ಲಿ ಸಹಕರಿಸಿದರು. ಸುಕನ್ಯಾ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

 

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page