September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗ್ರಾಮ ಪಂಚಾಯತ್ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ

ಶಿವಮೊಗ್ಗ ಜಿಲ್ಲೆ ಕುಂಸಿ ಸಮೀಪದ ಮುದ್ದಿನಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ರಘು ಎಂಬವರು ಫೆಬ್ರವರಿ 12ರಂದು ಬುಧವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ತಡೆಯಲು ಮುಂದಾದ ಪಿಡಿಒ ಮಹೇಶ್ ನಾಯ್ಕ ಅವರ ಬಾಯಿಗೂ ವಿಷ ಬಿದ್ದಿದ್ದು, ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಗ್ರಾಮ ಠಾಣಾ ಜಾಗ ಸರ್ವೆ ಆಗಿಲ್ಲವೆಂದು ಆರೋಪಿಸಿ ಗ್ರಾಮಸ್ಥರು ಪಂಚಾಯತ್ ಕಚೇರಿಗೆ ಆಗಮಿಸಿದ್ದು, ಈ ವೇಳೆ ಪಿಡಿಒ ಮತ್ತು ಪಂಚಾಯತ್ ಸಿಬ್ಬಂದಿ ಸರ್ವೆಗೆ ಮುಂದಾಗಿರುವ ಬಗ್ಗೆ ದಾಖಲೆಗಳನ್ನು ತೋರಿಸಿದ ನಂತರ ಗ್ರಾಮಸ್ಥರು ತೆರಳಿದ್ದಾರೆ.

ಬಳಿಕ ಪಿಡಿಒ ಚೇಂಬರ್ ಗೆ ಬಂದ ಗ್ರಾಮ ಪಂಚಾಯತ್ ಅಧ್ಯಕ್ಷ ರಘು ವಿಷ ಸೇವಿಸಲು ಯತ್ನಿಸಿದ್ದಾರೆ. ವಿಷದ ಬಾಟಲಿ ಕಸಿದುಕೊಳ್ಳಲು ಮುಂದಾದ ವೇಳೆ ಪಿಡಿಒ ಬಾಯಿಗೂ ವಿಷ ಬಿದ್ದಿದೆ ಎನ್ನಲಾಗಿದೆ. ಈ ಬಗ್ಗೆ ಕುಂಸಿ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಾಗಿದೆ.

You may also like

News

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಶಾಂತಿಗೆ ಭಂಗ – ಮೂವರ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ
News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು

You cannot copy content of this page