September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಂಡೂರು ಜಾತ್ರೋತ್ಸವ ಸಂಪನ್ನ

ಬೆಳ್ತಂಗಡಿ : ಮುಂಡೂರು ಶ್ರೀ ಮಂಗಳಗಿರಿ ಕ್ಷೇತ್ರ ಶ್ರೀ ನಾಗಕಲ್ಲುರ್ಟಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಕ್ಷೇತ್ರದಲ್ಲಿ ವಿಶೇಷ ಪೂಜೆ ಮತ್ತು ರಂಗಪೂಜೆ ಫ್ರೆಬ್ರವರಿ 13ರಂದು ಗುರುವಾರ ನಡೆಯಿತು.

ಬೆಳಗ್ಗೆ ನಾಗತಂಬಿಲ, ನಾಗಬ್ರಹ್ಮ ದೇವರಿಗೆ ತನುತಂಬಿಲ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಉದ್ಭವ ಗಣಪತಿಗೆ ಮತ್ತು ಶ್ರೀ ನಾಗಾಂಬಿಕೆ ಅಮ್ಮನವರಿಗೆ ಜೋಡು ರಂಗಪೂಜೆ ನಡೆಯಿತು. ಕಾರ್ಕಳ ಡೆನ್ನಾನ ಕಲಾವಿದರಿಂದ ಡೆನ್ನಾನ ತುಳುನಾಟಕ ನಡೆಯಿತು.

ಕ್ಷೇತ್ರದ ವತಿಯಿಂದ ಕ್ಷೇತ್ರದ ಅರ್ಚಕ ವೆಂಕಟೇಶ ಶಾಂತಿ, ನಾಟಕ ಕಲಾವಿದೆ ಅನುಷಾ ಆಚಾರ್ಯ, ಅಭಯ ಹಸ್ತ ತಂಡದ ಉಮನಾಥ್ ಕೋಟ್ಯಾನ್ ಮತ್ತು ತಂಡದವರಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಾಯೋಜಕ ಜಯರಾಜ್ ಬಂಗೇರ, ಪುಷ್ಪಾಲಂಕಾರ ಸೇವಾಕರ್ತರಾದ ಸುಧಾಮಣಿ, ಗೋಪಾಲ ಶೆಟ್ಟಿ ಅವರನ್ನು ಗೌರವಿಸಲಾಯಿತು. ಕ್ಷೇತ್ರದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದ 200 ಮಂದಿಗೆ ವಸ್ತ್ರ ವಿತರಿಸಲಾಯಿತು.

ಕ್ಷೇತ್ರದ ಆಡಳಿತ ಮೊಕ್ತೇಸರ ರಾಜೀವ, ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್, ಕಾರ್ಯದರ್ಶಿ ಜಯರಾಜ್ ಬಂಗೇರ, ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ, ಜೊತೆ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ಮತ್ತು ಭಕ್ತರು ಉಪಸ್ಥಿತರಿದ್ದರು.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page