May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಂಡೂರು ಜಾತ್ರೋತ್ಸವ ಸಂಪನ್ನ

ಬೆಳ್ತಂಗಡಿ : ಮುಂಡೂರು ಶ್ರೀ ಮಂಗಳಗಿರಿ ಕ್ಷೇತ್ರ ಶ್ರೀ ನಾಗಕಲ್ಲುರ್ಟಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಕ್ಷೇತ್ರದಲ್ಲಿ ವಿಶೇಷ ಪೂಜೆ ಮತ್ತು ರಂಗಪೂಜೆ ಫ್ರೆಬ್ರವರಿ 13ರಂದು ಗುರುವಾರ ನಡೆಯಿತು.

ಬೆಳಗ್ಗೆ ನಾಗತಂಬಿಲ, ನಾಗಬ್ರಹ್ಮ ದೇವರಿಗೆ ತನುತಂಬಿಲ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಉದ್ಭವ ಗಣಪತಿಗೆ ಮತ್ತು ಶ್ರೀ ನಾಗಾಂಬಿಕೆ ಅಮ್ಮನವರಿಗೆ ಜೋಡು ರಂಗಪೂಜೆ ನಡೆಯಿತು. ಕಾರ್ಕಳ ಡೆನ್ನಾನ ಕಲಾವಿದರಿಂದ ಡೆನ್ನಾನ ತುಳುನಾಟಕ ನಡೆಯಿತು.

ಕ್ಷೇತ್ರದ ವತಿಯಿಂದ ಕ್ಷೇತ್ರದ ಅರ್ಚಕ ವೆಂಕಟೇಶ ಶಾಂತಿ, ನಾಟಕ ಕಲಾವಿದೆ ಅನುಷಾ ಆಚಾರ್ಯ, ಅಭಯ ಹಸ್ತ ತಂಡದ ಉಮನಾಥ್ ಕೋಟ್ಯಾನ್ ಮತ್ತು ತಂಡದವರಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಾಯೋಜಕ ಜಯರಾಜ್ ಬಂಗೇರ, ಪುಷ್ಪಾಲಂಕಾರ ಸೇವಾಕರ್ತರಾದ ಸುಧಾಮಣಿ, ಗೋಪಾಲ ಶೆಟ್ಟಿ ಅವರನ್ನು ಗೌರವಿಸಲಾಯಿತು. ಕ್ಷೇತ್ರದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದ 200 ಮಂದಿಗೆ ವಸ್ತ್ರ ವಿತರಿಸಲಾಯಿತು.

ಕ್ಷೇತ್ರದ ಆಡಳಿತ ಮೊಕ್ತೇಸರ ರಾಜೀವ, ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್, ಕಾರ್ಯದರ್ಶಿ ಜಯರಾಜ್ ಬಂಗೇರ, ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ, ಜೊತೆ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ಮತ್ತು ಭಕ್ತರು ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page