May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕುದುರೆ ಏರಿ ಮದುವೆ ಮಂಟಪಕ್ಕೆ ಬರುತ್ತಿದ್ದಾಗಲೇ ವರನಿಗೆ ಹಾರ್ಟ್ ಅಟ್ಯಾಕ್

ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಸಹೋದರಿಯ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಯುವತಿಯೊಬ್ಬಳು ಹೃದಯಾಘಾತದಿಂದ ಸಾವನಪ್ಪಿದ್ದ ಸುದ್ದಿ ವೈರಲ್ ಆಗಿತ್ತು, ಇದೀಗ ವರನೊಬ್ಬ ಕುದುರೆ ಏರಿ ಇನ್ನೇನು ಮದುವೆ ಮಂಟಪ ಹತ್ತಿರ ಬರುತ್ತಿರುವ ವೇಳೆ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮಧ್ಯಪ್ರದೇಶದ ಶಿಯೋಪುರದಲ್ಲಿ ಫೆಬ್ರವರಿ 14ರಂದು ಶುಕ್ರವಾರ ವರದಿಯಾಗಿದೆ.

ಮೃತರನ್ನು ಪ್ರದೀಪ್ ಜಾಟ್ ಎಂದು ಗುರುತಿಸಲಾಗಿದ್ದು, ಇವರು NSUI ನ ಶಿಯೋಪುರ್ ಜಿಲ್ಲೆಯ ಅಧ್ಯಕ್ಷರಾಗಿದ್ದರು. ಹಿರಿಯ ಕಾಂಗ್ರೆಸ್ ನಾಯಕ ಯೋಗೇಶ್ ಜಾಟ್ ಅವರ ಸೋದರಳಿಯ. ಮೃತ ಪ್ರದೀಪ್ ಮದುವೆ ಸಂಭ್ರಮದಲ್ಲಿ ಕುದುರೆ ಏರಿ ಮಂಟಪಕ್ಕೆ ಬರುತ್ತಿದ್ದರು, ಇವರ ಸುತ್ತ ಸಂಬಂಧಿಕರು ಸಂತೋಷದಿಂದ ಡ್ಯಾನ್ಸ್ ಮಾಡುತ್ತಿದ್ದರು, ಈ ವೇಳೆ ಏಕಾಏಕಿ ಕುದುರೆಯ ಮೇಲೆ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರು ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂತೋಷದಲ್ಲಿದ್ದ ಮದುವೆ ಮನೆ ವರನ ಸಾವನಿಂದಾಗಿ ಸಾವಿನ ಮನೆಯಾಗಿ ಬದಲಾಗಿತ್ತು, ಮೆಹಂದಿ ಹಚ್ಚಿಕೊಂಡು ಕುಳಿತಿದ್ದ ವಧು ಪ್ರಜ್ಞೆ ತಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page