July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡಾ। ರಾಘವೇಂದ್ರ ಭಟ್ಟ, ಉಪ ಮಹಾ ನಿರ್ದೇಶಕ (ಪಶು ವಿಜ್ಞಾನ) ಅವರಿಗೆ ಪ್ರತಿಷ್ಠಿತ ಡಾ| ಪಿ. ಭಟ್ಟಾಚಾರ್ಯ ಪ್ರಶಸ್ತಿ ಪ್ರದಾನ

ರಾಷ್ಟೀಯ ಕೃಷಿ ವಿಜ್ಞಾನ ಅಕಾಡೆಮಿಯ ವತಿಯಿಂದ ನೀಡಲಾಗುವ ಪ್ರಸಿದ್ಧ ವಿಜ್ಞಾನಿ ಡಾ। ಪಿ. ಭಟ್ಟಾಚಾರ್ಯ ಮೆಮೋರಿಯಲ್ ಪ್ರಶಸ್ತಿಯನ್ನು ಭಾರತೀಯ ಕೃಷಿ ಸಂಶೋಧನೆ ಸಂಸ್ಥೆ, ದೆಹಲಿಯಲ್ಲಿ ಉಪ ಮಹಾ ನಿರ್ದೇಶಕ (ಪಶು ವಿಜ್ಞಾನ) ರಾಗಿ ಕಾರ್ಯನಿರತರಾಗಿರುವ ಡಾ| ರಾಘವೇಂದ್ರ ಭಟ್ಟ ಅವರಿಗೆ ಪ್ರದಾನ ಮಾಡಲಾಯಿತು.  ಡಾ| ಭಟ್ಟ ಅವರು ಈ ಪ್ರಶಸ್ತಿಯನ್ನು ಫೆಬ್ರವರಿ 20ರಂದು ಉತ್ತರಾಖಂಡ್ ನ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರಿಂದ , ಜಿ.ಬಿ. ಪಂತ್ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಪಂತ್ ನಗರ್ ನಲ್ಲಿ ಆಯೋಜಿತವಾದ 12ನೇ ರಾಷ್ಟೀಯ ಕೃಷಿ ವಿಜ್ಞಾನ ಕಾಂಗ್ರೆಸ್ ನಲ್ಲಿ ಸ್ವೀಕರಿಸಿದರು.

ಡಾ| ಭಟ್ಟ ಅವರು ಪಶು ವಿಜ್ಞಾನ ಕ್ಷೇತ್ರದಲ್ಲಿ ಒಬ್ಬ ಪ್ರಮುಖ ವಿಜ್ಞಾನಿಯಾಗಿದ್ದು, ಬೆಂಗಳೂರಿನ ರಾಷ್ಟೀಯ ಪಶು ಪೋಷಣೆ ಮತ್ತು ಶರೀರ ಕ್ರಿಯಾ ವಿಜ್ಞಾನ ಸಂಸ್ಥೆಗೆ ಒಂದು ದಶಕದ ಕಾಲ ನಿರ್ದೇಶಕರಾಗಿದ್ದು, ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಹೆಸರು ಗಳಿಸಲು ಕಾರಣರಾಗಿದ್ದಾರೆ.  ಡಾ| ಭಟ್ಟ ಅವರ ಮುಂಚೂಣಿಯಲ್ಲಿ ಸಂಸ್ಥೆಯು ಜರ್ಮನಿ, ಜಪಾನ್, ಫ್ರಾನ್ಸ್, ಆಸ್ಟ್ರೇಲಿಯಾ ಮುಂತಾದ ದೇಶಗಳ ಹಲವಾರು ಅಂತರ ರಾಷ್ಟೀಯ ವೈಜ್ಞಾನಿಕ ಸಂಸ್ಥೆಗಳೊಡನೆ ಸಹಯೋಗ ಹೊಂದಿ ಅನೇಕ ಪ್ರಮುಖ ಯೋಜನೆಗಳನ್ನು ಸಫಲಪೂರ್ವಕವಾಗಿ ನಿರ್ವಹಿಸಿ ಸಂಸ್ಥೆಯು ವಿಶ್ವ ಮಟ್ಟದಲ್ಲಿ ಹೆಸರು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.  ಡಾ| ಭಟ್ಟ ಅವರು  ಇದಕ್ಕೆ ಮುಂಚೆ  ತಮ್ಮ ಉತ್ಕೃಷ್ಟ ಸೇವೆಗಾಗಿ ರಾಷ್ಟ್ರ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಪ್ರಸ್ತುತ, ಡಾ| ಭಟ್ಟ ಅವರು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ, ದೆಹಲಿಯಲ್ಲಿ ಉಪ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

You may also like

News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು
News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at

You cannot copy content of this page