September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡಾ। ರಾಘವೇಂದ್ರ ಭಟ್ಟ, ಉಪ ಮಹಾ ನಿರ್ದೇಶಕ (ಪಶು ವಿಜ್ಞಾನ) ಅವರಿಗೆ ಪ್ರತಿಷ್ಠಿತ ಡಾ| ಪಿ. ಭಟ್ಟಾಚಾರ್ಯ ಪ್ರಶಸ್ತಿ ಪ್ರದಾನ

ರಾಷ್ಟೀಯ ಕೃಷಿ ವಿಜ್ಞಾನ ಅಕಾಡೆಮಿಯ ವತಿಯಿಂದ ನೀಡಲಾಗುವ ಪ್ರಸಿದ್ಧ ವಿಜ್ಞಾನಿ ಡಾ। ಪಿ. ಭಟ್ಟಾಚಾರ್ಯ ಮೆಮೋರಿಯಲ್ ಪ್ರಶಸ್ತಿಯನ್ನು ಭಾರತೀಯ ಕೃಷಿ ಸಂಶೋಧನೆ ಸಂಸ್ಥೆ, ದೆಹಲಿಯಲ್ಲಿ ಉಪ ಮಹಾ ನಿರ್ದೇಶಕ (ಪಶು ವಿಜ್ಞಾನ) ರಾಗಿ ಕಾರ್ಯನಿರತರಾಗಿರುವ ಡಾ| ರಾಘವೇಂದ್ರ ಭಟ್ಟ ಅವರಿಗೆ ಪ್ರದಾನ ಮಾಡಲಾಯಿತು.  ಡಾ| ಭಟ್ಟ ಅವರು ಈ ಪ್ರಶಸ್ತಿಯನ್ನು ಫೆಬ್ರವರಿ 20ರಂದು ಉತ್ತರಾಖಂಡ್ ನ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರಿಂದ , ಜಿ.ಬಿ. ಪಂತ್ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಪಂತ್ ನಗರ್ ನಲ್ಲಿ ಆಯೋಜಿತವಾದ 12ನೇ ರಾಷ್ಟೀಯ ಕೃಷಿ ವಿಜ್ಞಾನ ಕಾಂಗ್ರೆಸ್ ನಲ್ಲಿ ಸ್ವೀಕರಿಸಿದರು.

ಡಾ| ಭಟ್ಟ ಅವರು ಪಶು ವಿಜ್ಞಾನ ಕ್ಷೇತ್ರದಲ್ಲಿ ಒಬ್ಬ ಪ್ರಮುಖ ವಿಜ್ಞಾನಿಯಾಗಿದ್ದು, ಬೆಂಗಳೂರಿನ ರಾಷ್ಟೀಯ ಪಶು ಪೋಷಣೆ ಮತ್ತು ಶರೀರ ಕ್ರಿಯಾ ವಿಜ್ಞಾನ ಸಂಸ್ಥೆಗೆ ಒಂದು ದಶಕದ ಕಾಲ ನಿರ್ದೇಶಕರಾಗಿದ್ದು, ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಹೆಸರು ಗಳಿಸಲು ಕಾರಣರಾಗಿದ್ದಾರೆ.  ಡಾ| ಭಟ್ಟ ಅವರ ಮುಂಚೂಣಿಯಲ್ಲಿ ಸಂಸ್ಥೆಯು ಜರ್ಮನಿ, ಜಪಾನ್, ಫ್ರಾನ್ಸ್, ಆಸ್ಟ್ರೇಲಿಯಾ ಮುಂತಾದ ದೇಶಗಳ ಹಲವಾರು ಅಂತರ ರಾಷ್ಟೀಯ ವೈಜ್ಞಾನಿಕ ಸಂಸ್ಥೆಗಳೊಡನೆ ಸಹಯೋಗ ಹೊಂದಿ ಅನೇಕ ಪ್ರಮುಖ ಯೋಜನೆಗಳನ್ನು ಸಫಲಪೂರ್ವಕವಾಗಿ ನಿರ್ವಹಿಸಿ ಸಂಸ್ಥೆಯು ವಿಶ್ವ ಮಟ್ಟದಲ್ಲಿ ಹೆಸರು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.  ಡಾ| ಭಟ್ಟ ಅವರು  ಇದಕ್ಕೆ ಮುಂಚೆ  ತಮ್ಮ ಉತ್ಕೃಷ್ಟ ಸೇವೆಗಾಗಿ ರಾಷ್ಟ್ರ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಪ್ರಸ್ತುತ, ಡಾ| ಭಟ್ಟ ಅವರು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ, ದೆಹಲಿಯಲ್ಲಿ ಉಪ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

You may also like

News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ
News

ಕಲ್ಲುಗುಂಡಿ ದರೋಡೆ ಪ್ರಕರಣದಲ್ಲಿ ಶ್ರೀನಿವಾಸ ದೋಷಮುಕ್ತ

ಆರೋಪಿ ಪರ ಪ್ರಖ್ಯಾತ ವಕೀಲರಾದ ಪುತ್ತೂರು ಮಹೇಶ್ ಕಜೆ ಯಶಸ್ವಿ ವಾದ ಪುತ್ತೂರು: ಸುಮಾರು 13 ವರ್ಷಗಳ ಹಿಂದೆ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ

You cannot copy content of this page