September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೂರಿಕುಮೇರು ಮಸೀದಿಯಲ್ಲಿ ಇಸಾಬಾ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯಕ್ರಮ

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ರಾಜ್ಯ ಸಮಿತಿಯ ನಿರ್ದೇಶನದಂತೆ ರಂಝಾನ್ ತಿಂಗಳನ್ನು ಸ್ವಾಗತಿಸುವ ಸಲುವಾಗಿ “ಮನೆ ಮನಗಳನ್ನು ಶುಚಿಗೊಳಿಸೋಣ ಪವಿತ್ರ ಮಾಸವನ್ನು ಸ್ವಾಗತಿಸೋಣ” ಎಂಬ ಧ್ಯೇಯ ವಾಕ್ಯದಡಿ ಸ್ವಚ್ಛತಾ ಕಾರ್ಯಕ್ರಮವನ್ನು ಕರ್ನಾಟಕ ಮುಸ್ಲಿಂ ಜಮಾ‌ಅತ್, ಎಸ್ಸೆಸ್ಸೆಫ್, ಎಸ್‌ವೈ‌ಎಸ್ ಸೂರಿಕುಮೇರು ಯುನಿಟ್ ವತಿಯಿಂದ ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿಯ ಪರಿಸರದಲ್ಲಿ ಇಸಾಬಾ ಸ್ವಯಂ ಸೇವಕರು ಸ್ವಚ್ಛತಾ ಕಾರ್ಯ ನಡೆಸಿದರು.

ಅಲ್ ಮುರ್ಶಿದ್ ಅಕಾಡೆಮಿ ಕೆದಿಲ ಇದರ ಮುಖ್ಯಸ್ಥರು ಹಾಗೂ ಸೂರಿಕುಮೇರು ಮಸೀದಿಯ ಅಧ್ಯಕ್ಷರೂ ಆದ ಬಹು| ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ದುಆ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯೂಸುಫ್ ಹಾಜಿ, ಅಶ್ರಫ್ ಸಖಾಫಿ, ಹನೀಫ್ ಸಂಕ, ಅಝೀಂ ನೆಲ್ಲಿ, ಹಮೀದ್ ಮಾಣಿ, ಇಬ್ರಾಹಿಂ ಮುಸ್ಲಿಯಾರ್ ಮಾಣಿ, ಸೂರಿಕುಮೇರು ಇಲ್ಲಿಯವರಾದ ಅಬ್ದುಲ್ ಕರೀಂ, ಉಮ್ಮರ್ ಫಾರೂಕ್, ಇಮ್ರಾನ್, ಉಮ್ಮರ್ ಚಿಕನ್, ಹಂಝ, ಸಮೀರ್ ಲೈಮ್, ಹಾಫಿಳ್ ಮುರ್ಶಿದ್ ಸ್ವಚ್ಛತಾ ಕಾರ್ಯ ನಡೆಸಿದರು. ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿದರು.

You may also like

News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ
News

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಚೇತನ್ ಆರ್. IPS

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (DIGP) ಹಿರಿಯ IPS ಅಧಿಕಾರಿ ಚೇತನ್ ಆರ್. ಅವರು ಆಗಸ್ಟ್ 31ರಂದು ಸೋಮವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಳಗಿನ ಜಾವ

You cannot copy content of this page