May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ ವಲಯದ ಮಾನೆಲಾ ಧರ್ಮಕೇಂದ್ರದಲ್ಲಿ ವಿಶ್ವ ಮಹಿಳಾ ದಿನ ಆಚರಣೆ

ವಿಟ್ಲ ವಲಯದ ಕ್ರಿಸ್ತರಾಜ ದೇವಾಲಯ ಮನೆಲಾ ಇಲ್ಲಿ ಮಾರ್ಚ್ 2ರಂದು ಆದಿತ್ಯವಾರ ವಿಶ್ವ ಮಹಿಳಾ ದಿನವನ್ನು ಆಚರಿಸಲಾಯಿತು.

 

ಚರ್ಚ್ ಧರ್ಮಗುರು ವಂದನೀಯ ಫಾದರ್ ಸ್ಟ್ಯಾನಿಸ್ಲಸ್ ರೊಡ್ರಿಗಸ್ ಅಧ್ಯಕ್ಷತೆಯನ್ನು ವಹಿಸಿದ್ದರು.  ಮುಖ್ಯ ಅತಿಥಿಗಳಾಗಿ ಪುತ್ತೂರಿನ ಮಾಯ್ ದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಫ್ಲಾವಿಯ ಆಲ್ಬುಕರ್ಕ್ ಆಗಮಿಸಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ‘ಆಧುನಿಕ ಯುಗದಲ್ಲಿ ಮಹಿಳೆಯರು ಹಿಂದಕ್ಕೆ ಹೋಗದೆ ಪ್ರತಿಯೊಂದರಲ್ಲಿಯೂ ಮುಂದೆ ಬಂದು ತಮ್ಮ ಹಕ್ಕುಗಳಿಗೋಸ್ಕರ ಧ್ವನಿಯೆತ್ತುವಂತೆ’ ಕರೆ ನೀಡಿದರು.

 

ಕಾರ್ಯಕ್ರಮದಲ್ಲಿ ಚರ್ಚ್ ಪಾಲನ ಸಮಿತಿಯ ಉಪಾಧ್ಯಕ್ಷ ರೋಷನ್ ಟೆಲ್ಲಿಸ್, ಕಾರ್ಯದರ್ಶಿ ಫಿಲೋಮಿನಾ ಡಿಸೋಜ ಪಲಸ್ತಡ್ಕ, ಆಯೋಗಗಳ ಸಂಯೋಜಕ ವಿಕ್ಟರ್ ಕುಟಿನ್ಹೊ, ಧರ್ಮ ಭಗಿನಿಯರು, ಮಾನೆಲ ಘಟದ ಸ್ತ್ರೀ ಸಂಘಟನೆಯ ಅಧ್ಯಕ್ಷೆ ಮೇರಿ ಡಿಸೋಜಾ, ಕಾರ್ಯದರ್ಶಿ ಜ್ಯೋತಿ ಡಿಸೋಜಾ ಹಾಗೂ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.

ಮಹಿಳೆಯರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ಲೀಮಾ ಟೆಲ್ಲಿಸ್ ಸ್ವಾಗತಿಸಿ, ಜ್ಯೋತಿ ಡಿಸೋಜ ವಂದಿಸಿದರು. ಉಪನ್ಯಾಸಕಿ ಶೈಲಾ ಡಿಸೋಜ ಕಾರ್ಯಕ್ರಮವನ್ನು ನಿರೂಪಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page