September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ಜೈಲು ಶಿಕ್ಷೆ ಮತ್ತು ದಂಡ

ಸರ್ಕಾರಿ ಖರಾಬ್ ಜಮೀನಿಗೂ ಅಕ್ರಮ ಖಾತೆ ಮಾಡಿಕೊಟ್ಟ ಪ್ರಕರಣ

ಸರಕಾರಿ ಜಮೀನನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ನ್ಯಾಯಾಲಯವು ತಕ್ಕ ಪಾಠ ಕಲಿಸಿದೆ. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಈ ಪೈಕಿ ಮೂವರು ಮೃತಪಟ್ಟಿದ್ದಾರೆ. ಈ ಘಟನೆ ನಡೆದಿರುವುದು ಕೆಜಿಎಫ್ ಘಟ್ಟ ಕಾಮಧೇನು ಹಳ್ಳಿಯಲ್ಲಿ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಕೆಜಿಎಫ್‌ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಕೆಜಿಎಫ್ ಘಟ್ಟ ಕಾಮಧೇನು ಹಳ್ಳಿಯ ಹಿಂದಿನ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ಕೆಜಿಎಫ್ ನ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಂ. ಮಂಜು ಇವರಿದ್ದ ನ್ಯಾಯಪೀಠ ಈ ಪ್ರಕರಣದಲ್ಲಿ ತೀರ್ಪು ನೀಡಿದೆ.

ತೀರ್ಪಿನ ಪ್ರಕಾರ ಅಂದಿನ ಅಧ್ಯಕ್ಷ ಮಜು ಭಾರ್ಗವಿ, ಉಪಾಧ್ಯಕ್ಷ ಶಶಿಧರ್, ಪಿಡಿಓ ರತ್ನಮ್ಮ, ಬಿಲ್ ಕಲೆಕ್ಟರ್ ಮತ್ತು ಕಂಪ್ಯೂಟರ್ ಆಪರೇಟರ್‌ಗಳಾದ ನಾರಾಯಣಸ್ವಾಮಿ ಮತ್ತು ರಾಜೇಂದ್ರ ಅವರು ಶಿಕ್ಷೆಗೊಳಗಾದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು.

ಅದೇ ರೀತಿ, ಫಲಾನುಭವಿಗಳಾದ ಅಕ್ರಮ ಖಾತೆ ಮಾಡಿಕೊಂಡ ಮುರುಗೇಶ್, ಸುಬ್ರಮಣಿ, ಕದಂಬವತಿ, ಶ್ರೀನಿವಾಸ್, ಪ್ರಿಯ, ಶ್ರೀಧರ್, ಅಣ್ಣಾದೊರೈ, ಆರ್. ಪಾಂಡುರಂಗನ್ ಮತ್ತು ಬಿ. ರವಿಚಂದ್ರನ್ ಪ್ರಕರಣದಲ್ಲಿ ಅಪರಾಧಿಗಳಾಗಿದ್ದಾರೆ.

ಉಳಿದ ತಪ್ಪಿತಸ್ಥರಾದ ಗಂಗಾಧರಂ, ಜಗದಂಬಾಲ್ ಮತ್ತು ಎಡ್ವಿನ್ ಮೃತಪಟ್ಟಿದ್ದಾರೆ. ಪ್ರಕರಣದ ಆರೋಪಿಗಳಾದ ಮಂಜು ಭಾರ್ಗವಿ, ಶಶಿಧರ್, ಪಿಡಿಓ ರತ್ನಮ್ಮ, ಸಿಬ್ಬಂದಿ ನಾರಾಯಣಸ್ವಾಮಿ ಮತ್ತು ರಾಜೇಂದ್ರ ಅವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಇನ್ನು ಅಕ್ರಮ ಜಮೀನಿನ ಫಲಾನುಭವಿಗಳಾದ 9 ಮಂದಿಗೂ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. 12 ಮಂದಿಗೆ ಅಕ್ರಮವಾಗಿ ಖಾತೆ ಮಾಡಿಕೊಡಲಾಗಿತ್ತು.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page