July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮದುವೆಯಾದ ರಾತ್ರಿಯೇ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತ

ಮದುವೆಯಾದ ರಾತ್ರಿಯೇ ಪತ್ನಿಯನ್ನು ಕೊಂದು ನವವಿವಾಹಿತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆಯು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಯೋಧ್ಯೆ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದ ಪ್ರದೀಪ್ ಎಂಬಾತ ಶಿವಾಣಿ ಎಂಬ ಯುವತಿಯನ್ನು ಮಾರ್ಚ್ 8ರಂದು ಶನಿವಾರ ವಿವಾಹವಾಗಿದ್ದ. ವಿವಾಹ ಸಮಾರಂಭ ಮುಗಿದ ಬಳಿಕವೇ ಇಬ್ಬರೂ ಮೃತಪಟ್ಟಿದ್ದಾರೆ.

ಮದುವೆ ಸಮಾರಂಭದ ಬಳಿಕ ಎಲ್ಲರೂ ಮಧ್ಯಾಹ್ನದ ವೇಳೆಗೆ ವರನ ಮನೆಗೆ ಆಗಮಿಸಿದ್ದರು. ಮನೆಯಲ್ಲಿ ಕೆಲವು ಶಾಸ್ತ್ರಗಳನ್ನು ನಡೆಸಲಾಗಿದೆ. ಎಲ್ಲಾ ಶಾಸ್ತ್ರಗಳು ಮುಗಿದ ಬಳಿಕ ವಧು ಮತ್ತು ವರ ರಾತ್ರಿ ಅವರ ಕೋಣೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ ರಾಜ್ ಕರಣ್ ನಯ್ಯಾರ್, ಮಾರ್ಚ್ 9ರಂದು ಭಾನುವಾರ ಬೆಳಿಗ್ಗೆ ಎಷ್ಟು ಬಾಗಿಲು ತಟ್ಟಿದರೂ ದಂಪತಿ ಬಾಗಿಲು ತೆರೆದಿಲ್ಲ. ಆದ್ದರಿಂದ ಕುಟುಂಬಸ್ಥರು ಬಾಗಿಲು ಒಡೆದು ಒಳಗೆ ನೋಡಿದಾಗ ಶಿವಾಣಿ ಮೃತದೇಹ ಹಾಸಿಗೆಯಲ್ಲಿ ಕಂಡುಬಂದಿದೆ. ಪ್ರದೀಪ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿಸಿದ್ದಾರೆ.

ಕೋಣೆಯ ಬಾಗಿಲಿನ ಚಿಲಕವನ್ನು ಒಳಭಾಗದಿಂದಲೇ ಹಾಕಲಾಗಿತ್ತು. ಆದ್ದರಿಂದ ಪ್ರಾಥಮಿಕ ತನಿಖೆಯಲ್ಲಿ ವರ ವಧುವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page