May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸುರತ್ಕಲ್ ಹೋಲಿ ಫ್ಯಾಮಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಲೆಫ್ಟಿನೆಂಟ್ ಆಕಾಶ್ ಆರ್. ರವರಿಗೆ ಸನ್ಮಾನ

ಸುರತ್ಕಲ್‌ನ ಹೋಲಿ ಫ್ಯಾಮಿಲಿ ಆಂಗ್ಲ ಮಾಧ್ಯಮ ಶಾಲೆ ತನ್ನ ಗೌರವಾನ್ವಿತ ಹಳೆಯ ವಿದ್ಯಾರ್ಥಿ ಲೆಫ್ಟಿನೆಂಟ್ ಆಕಾಶ್ ಆರ್. ರವರನ್ನು ಇಂದು ಮಾರ್ಚ್ 15ರಂದು ಶನಿವಾರ ನಡೆದ ವಿಜೃಂಭಣೆಯ ಸನ್ಮಾನ ಸಮಾರಂಭದಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

2015-16ನೇ ಸಾಲಿನ ವಿದ್ಯಾರ್ಥಿಯಾಗಿದ್ದ ಆಕಾಶ್ ಆರ್. ಅವರನ್ನು ಶಾಲಾ ಸಂಚಾಲಕರಾದ ಅತೀ ವಂದನೀಯ ಫಾದರ್ ಆಸ್ಟಿನ್ ಪೀಟರ್ ಪೆರಿಸ್ ಹಾಗೂ ಪ್ರಾಂಶುಪಾಲರಾದ ಐ. ಕ್ರಿಸ್ಟೋಫರ್ ಕೋಟಿಯನ್ ರವರು ಸನ್ಮಾನಿಸಿದರು. ಭಾರತೀಯ ಸೇನೆಗೆ ಆಯ್ಕೆಯಾದ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾದ ಆಕಾಶ್ ರವರ ಸೇವಾ ಮನೋಭಾವ ಮತ್ತು ಸಾಧನೆಗಳಿಗೆ ಈ ಸನ್ಮಾನವು ಕೃತಜ್ಞತೆ ಸಲ್ಲಿಸಿತು.

ಶಾಲೆಯ ಎಲ್ಲರಿಗೂ ಈ ಕ್ಷಣ ಹೆಮ್ಮೆಯ ಅನುಭವವನ್ನು ಉಂಟುಮಾಡಿತು. ಲೆಫ್ಟಿನೆಂಟ್ ಆಕಾಶ್ ರವರ ಪ್ರೇರಣಾದಾಯಕ ಭಾಷಣ ವಿದ್ಯಾರ್ಥಿಗಳಿಗೆ ತೀವ್ರ ಸ್ಪೂರ್ತಿದಾಯಕವಾಗಿತ್ತು. ಶಾಲಾ ಸಮುದಾಯ ಲೆಫ್ಟಿನೆಂಟ್ ಆಕಾಶ್ ಆರ್. ರವರಿಗೆ ಹಾರ್ದಿಕ ಅಭಿನಂದನೆಗಳನ್ನು ಅರ್ಪಿಸಿ, ಅವರ ಭವಿಷ್ಯ ಉತ್ತಮವಾಗಿರಲಿ ಎಂದು ಹಾರೈಸಲಾಯಿತು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page