September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಯನ್ನು ಶೀಘ್ರ ಬಂಧಿಸಲು ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಆಗ್ರಹ

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬಾತನ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಲಿತ ವ್ಯಕ್ತಿಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆರೋಪಗಳು ಕೇಳಿ ಬರುತ್ತಿವೆ ಹಾಗೂ ಈ ಬಗ್ಗೆ ಈಗಾಗಲೇ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಸಹ ಬಂಧಿಸದೇ ಆರೋಪಿಗೆ ಸಹಕರಿಸುತ್ತಿರುವುದು ಖಂಡನೀಯ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲುರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹತ್ತನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ತನ್ನ ಪ್ರಭಾವ ಬಳಸಿ ದೌರ್ಜನ್ಯವನ್ನು ಯಾರಿಗೂ ಹೇಳಬಾರದೆಂದು ಆರೋಪಿ ಮಹೇಶ್ ಭಟ್ ದಲಿತ ಕುಟುಂಬದ ಮೇಲೆ ಬೆದರಿಕೆ ಹಾಕಿರುವುದು ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಗೈರು ಹಾಜರಾಗಿರುವ ಬಗ್ಗೆ ವಿಚಾರಿಸಲು ಶಿಕ್ಷಕರು ಬಾಲಕಿಯ ಮನೆಗೆ ತೆರಳಿದಾಗ ಬಾಲಕಿಯನ್ನು ಶಿಕ್ಷಕರ ಜೊತೆ ಮಾತನಾಡಿಸಲು ಆ ಕುಟುಂಬ ಹಿಂಜರಿದಿದೆ ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಈ ಪ್ರಕರಣದಲ್ಲಿ ಆರೋಪಿಯಿಂದ ಲೈಂಗಿಕ ದೌರ್ಜನ್ಯ, ದಲಿತ ದೌರ್ಜನ್ಯ, ಬೆದರಿಕೆ, ಸಾಕ್ಷ್ಯ ನಾಶದ ಪ್ರಯತ್ನ ಇತ್ಯಾದಿಗಳಾದರೂ ಸ್ಥಳೀಯ ಪೋಲಿಸ್ ಇಲಾಖೆ ಆರೋಪಿಯನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸುವ ಬದಲು ಆರೋಪಿಗೆ ಜೈಲು ಶಿಕ್ಷೆಯಿಂದ ರಕ್ಷಿಸಲು ಪ್ರಯತ್ನ ಪಡುತ್ತಿರುವಂತೆ ತೋರುತ್ತಿದೆ.

ಫೋಕ್ಸೋ ಹಾಗೂ ಅಟ್ರಾಸಿಟಿ ಕೇಸ್ ದಾಖಲು ಮಾಡಿದ್ದರೂ ಬಿಜೆಪಿ ಮುಖಂಡನನ್ನು ವಿಟ್ಲ ಪೋಲಿಸರು ಬಂಧಿಸದೇ ಇರಲು ಕಾರಣವೇನು? ಪೋಲಿಸರಿಗೆ ಆರೋಪಿಯ ಪರವಾಗಿ ಒತ್ತಡ ಹಾಕುತ್ತಿರುವವರು ಯಾರು? ಈ ಪ್ರಕರಣದ ಬಗ್ಗೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರು ಸ್ವತಃ ಮುತುವರ್ಜಿವಹಿಸಿ ಆರೋಪಿ ಹಾಗೂ ಆರೋಪಿಯ ಪರವಾಗಿ ಸಾಕ್ಷ್ಯ ನಾಶ ಮಾಡಲು ಪ್ರಯತ್ನ ಪಟ್ಟವರ ವಿರುದ್ಧವೂ ಕ್ರಮ ಕೈಗೊಂಡು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಒತ್ತಾಯಿಸಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page