July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಯನ್ನು ಶೀಘ್ರ ಬಂಧಿಸಲು ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಆಗ್ರಹ

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬಾತನ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಲಿತ ವ್ಯಕ್ತಿಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆರೋಪಗಳು ಕೇಳಿ ಬರುತ್ತಿವೆ ಹಾಗೂ ಈ ಬಗ್ಗೆ ಈಗಾಗಲೇ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಸಹ ಬಂಧಿಸದೇ ಆರೋಪಿಗೆ ಸಹಕರಿಸುತ್ತಿರುವುದು ಖಂಡನೀಯ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲುರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹತ್ತನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ತನ್ನ ಪ್ರಭಾವ ಬಳಸಿ ದೌರ್ಜನ್ಯವನ್ನು ಯಾರಿಗೂ ಹೇಳಬಾರದೆಂದು ಆರೋಪಿ ಮಹೇಶ್ ಭಟ್ ದಲಿತ ಕುಟುಂಬದ ಮೇಲೆ ಬೆದರಿಕೆ ಹಾಕಿರುವುದು ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಗೈರು ಹಾಜರಾಗಿರುವ ಬಗ್ಗೆ ವಿಚಾರಿಸಲು ಶಿಕ್ಷಕರು ಬಾಲಕಿಯ ಮನೆಗೆ ತೆರಳಿದಾಗ ಬಾಲಕಿಯನ್ನು ಶಿಕ್ಷಕರ ಜೊತೆ ಮಾತನಾಡಿಸಲು ಆ ಕುಟುಂಬ ಹಿಂಜರಿದಿದೆ ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಈ ಪ್ರಕರಣದಲ್ಲಿ ಆರೋಪಿಯಿಂದ ಲೈಂಗಿಕ ದೌರ್ಜನ್ಯ, ದಲಿತ ದೌರ್ಜನ್ಯ, ಬೆದರಿಕೆ, ಸಾಕ್ಷ್ಯ ನಾಶದ ಪ್ರಯತ್ನ ಇತ್ಯಾದಿಗಳಾದರೂ ಸ್ಥಳೀಯ ಪೋಲಿಸ್ ಇಲಾಖೆ ಆರೋಪಿಯನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸುವ ಬದಲು ಆರೋಪಿಗೆ ಜೈಲು ಶಿಕ್ಷೆಯಿಂದ ರಕ್ಷಿಸಲು ಪ್ರಯತ್ನ ಪಡುತ್ತಿರುವಂತೆ ತೋರುತ್ತಿದೆ.

ಫೋಕ್ಸೋ ಹಾಗೂ ಅಟ್ರಾಸಿಟಿ ಕೇಸ್ ದಾಖಲು ಮಾಡಿದ್ದರೂ ಬಿಜೆಪಿ ಮುಖಂಡನನ್ನು ವಿಟ್ಲ ಪೋಲಿಸರು ಬಂಧಿಸದೇ ಇರಲು ಕಾರಣವೇನು? ಪೋಲಿಸರಿಗೆ ಆರೋಪಿಯ ಪರವಾಗಿ ಒತ್ತಡ ಹಾಕುತ್ತಿರುವವರು ಯಾರು? ಈ ಪ್ರಕರಣದ ಬಗ್ಗೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರು ಸ್ವತಃ ಮುತುವರ್ಜಿವಹಿಸಿ ಆರೋಪಿ ಹಾಗೂ ಆರೋಪಿಯ ಪರವಾಗಿ ಸಾಕ್ಷ್ಯ ನಾಶ ಮಾಡಲು ಪ್ರಯತ್ನ ಪಟ್ಟವರ ವಿರುದ್ಧವೂ ಕ್ರಮ ಕೈಗೊಂಡು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಒತ್ತಾಯಿಸಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page