May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆದರಿಕೆಯ ದೈಹಿಕ ಸಂಪರ್ಕದಿಂದಾಗಿ ಬಾಲಕಿ ಗರ್ಭಿಣಿ –  ಆರೋಪಿಯ ಮೇಲೆ ಕೇಸು ದಾಖಲು

ಆಟೋ ಚಾಲಕ ಮಂಜುನಾಥ್ ಕಟ್ಟತಡ್ಕ ಎಂಬಾತನು ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಕಾಲೇಜಿಗೆ ರಜೆ ಇದ್ದ ದಿನದಂದು, ಬಾಲಕಿ ಮನೆಯಲ್ಲಿ ಒಬ್ಬಳೇ ಇರುವಾಗ ನೀರು ಕೇಳುವ ನೆಪದಲ್ಲಿ ಬಂದು ಬಲಾತ್ಕಾರವಾಗಿ ದೈಹಿಕ ಸಂಪರ್ಕವನ್ನು ಹೊಂದಿದ್ದಾನೆ.

ಬಳಿಕ ಯಾರಲ್ಲೂ ಹೇಳದಂತೆ ಬೆದರಿಕೆಯನ್ನು ಒಡ್ಡಿತ್ತಾನೆ. ಈ ಘಟನೆಯ ಬಳಿಕ ಆರೋಪಿತನು ಬಾಲಕಿಯನ್ನು ಬೆದರಿಸಿ ಇದೇ ರೀತಿ ಏಳೆಂಟು ಬಾರಿ ದೈಹಿಕ ಸಂಪರ್ಕ ಮಾಡಿದ್ದು, ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಕೊನೆಯ ಬಾರಿ ದೈಹಿಕ ಸಂಪರ್ಕ ಮಾಡಿರುತ್ತಾನೆ.

ಏಪ್ರಿಲ್ 5 ರಂದು ಬಾಲಕಿಯ ಆರೋಗ್ಯ ತಪಾಸಣೆಗೆ ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ಅವಳು ಗರ್ಭಿಣಿ ಎಂದು ತಿಳಿದುಬಂತು.

ಅಪ್ರಾಪ್ತೆ ಸಂತ್ರಸ್ತೆ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಕಲಂ:  64(2) (m), 352(3) BNS 2023 ಮತ್ತು ಕಲಂ 5(l) ಜೊತೆಗೆ 6 ಪೋಕ್ಸೋ ಕಾಯಿದೆ 2012 ರಂತೆ ಪ್ರಕರಣ ದಾಖಲಾಗಿರುತ್ತದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page