May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾರವಾರ ಧರ್ಮಕ್ಷೇತ್ರದ ಕಥೊಲಿಕ್ ಅಸೋಸಿಯೇಶನ್ ವತಿಯಿಂದ ರಾಜಕೀಯ ಜಾಗೃತಿ ಶಿಬಿರ

ಕಾರವಾರ ಥರ್ಮಕ್ಷೇತ್ರದ ಕಥೊಲಿಕ್ ಅಸೋಸಿಯೇಷನ್ ವತಿಯಿಂದ ಕಾರವಾರ ಧರ್ಮಕ್ಷೇತ್ರದ ಮಟ್ಟದಲ್ಲಿ ರಾಜಕೀಯ ಜಾಗೃತಿ ಶಿಬಿರವನ್ನು ಎಪ್ರಿಲ್ 06ರಂದು ಆದಿತ್ಯವಾರ ಕುಮಟಾ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರವಾರ ಧರ್ಮಕ್ಷೇತ್ರದ ಶ್ರೇಷ್ಠ ಧರ್ಮಗುರುಗಳಾದ ಮೊನ್ಸಿಜ್ಞೊರ್ ರಿಚರ್ಡ್ ರೊಡ್ರಿಗಸ್ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಮತ್ತು ಅಖಿಲ ಭಾರತ ಕಥೊಲಿಕ್ ಯೂನಿಯನ್ ಇದರ ಕರ್ನಾಟಕ ಪ್ರಾಂತ್ಯದ ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಮತ್ತು ಆಲ್ವಿನ್ ಡಿಸೋಜ ಪಾನೀರ್ ಇವರೀರ್ವರನ್ನು ಸನ್ಮಾನಿಸಲಾಯಿತು. ಇಂದಿನ ಪರಿಸ್ಥಿತಿಯಲ್ಲಿ ರಾಜಕೀಯಕ್ಕೆ ಕೊಂಕಣಿಗರ ಅಗತ್ಯತೆ ಬಗ್ಗೆ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ಮತ್ತು ಪ್ರಸ್ತುತ ರಾಜಕೀಯ ಆಗೂಹೋಗುಗಳ ಬಗ್ಗೆ ಆಲ್ವಿನ್ ಡಿಸೋಜರವರು ಮಾತಾನಾಡಿದರು. ಕಾರ್ಯಕ್ರಮದಲ್ಲಿ ಕಥೊಲಿಕ್ ಅಸೋಸಿಯೇಷನ್ ಡಯಾಸಿಸ್ ಆಫ್ ಕಾರವಾರದ ಅಧ್ಯಕ್ಷ ಜೋರ್ಜ್ ಫೆರ್ನಾಂಡಿಸ್, ಉಪಾಧ್ಯಕ್ಷ ಸ್ಟಿಫನ್ ರೊಡ್ರಿಗಸ್, ಕಾರ್ಯದರ್ಶಿ ಕ್ಲೆಮೆಂಟ್ ಗುಡಿನ್ಹೂ, ರಾಜಕೀಯ ಸಮಿತಿ ಅಧ್ಯಕ್ಷ ಕೈತಾನಾ ಬಾರ್ಬೋಜಾ, ರಾಜಕೀಯ ಜಾಗೃತಿ ಶಿಬಿರದ ಸಂಘಟನೆಯ ಅಧ್ಯಕ್ಷ ಜೋಸೆಪ್ ನೊರೊನ್ಹಾ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page