May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹಳೇ ಆರೋಪಿಯಿಂದ ಪರಂಗಿಪೇಟೆಯಲ್ಲಿ ಬೀಗ ಮುರಿದು ಕಳ್ಳತನ – ಆರೋಪಿ ನಝೀರ್‌ ಮಹಮ್ಮದ್ ಅಂದರ್

2024ರಲ್ಲಿ ಕಣ್ಣೂರು ಟಿ.ವಿ.ಎಸ್‌. ಶೊರೂಮ್‌ ನ ಗಾಜು ಒಡೆದು ಹಣ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಹಳೇ ಆರೋಪಿ 26 ವರ್ಷ ಪ್ರಾಯದ ನಝೀರ್‌ ಮಹಮ್ಮದ್‌ ಕಣ್ಣೂರು, ಇವನು ದಿನಾಂಕ ಎಪ್ರಿಲ್ 11/12ರ ಮಧ್ಯರಾತ್ರಿ ಪುದು ಗ್ರಾಮದ ಪರಂಗಿಪೇಟೆಯಲ್ಲಿರುವ ವಿಶ್ವಾಸ ಸಿಟಿ ಸೆಂಟರ್ ನ ವೈಟ್ ಲೈನ್ ಕಿಡ್ಸ್ ವರ್ಲ್ಡ್ ಬಟ್ಟೆ ಅಂಗಡಿಗೆ ನುಗ್ಗಿ ಕಳವುಗೈದ ಘಟನೆಗೆ‌ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 42/2025 ಕಲಂ: 331(4) 305 ಬಿ.ಎನ್‌.ಎಸ್. ರಂತೆ ಪ್ರಕರಣ ದಾಖಲಾಗಿರುತ್ತದೆ.

ಇವನನ್ನು ಎಪ್ರಿಲ್ 19ರಂದು ದಸ್ತಗಿರಿ ಮಾಡಿ, ಆತನಿಂದ ಕಳವುಗೈದ ನಗದಿನ ಪೈಕಿ   ರೂಪಾಯಿ 1,09,490/-ನಗದು ಮತ್ತು ಕೃತ್ಯಕ್ಕೆ ಬಳಸಿದ ಮೋಟಾರ್‌ ಸೈಕಲ್‌ ನ್ನು ಸ್ವಾಧೀನಪಡಿಸಲಾಗಿದೆ. ಬಂಟ್ವಾಳ‌ ಗ್ರಾಮಾಂತರ ಪೊಲೀಸ್‌ ಠಾಣಾ  ಪೊಲೀಸ್ ನಿರೀಕ್ಷಕ ಶಿವಕುಮಾರ ಬಿ. ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ ಸದ್ರಿ ಪ್ರಕರಣದ‌ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page