August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೀಗ ಹಾಕಿದ ಮನೆಯಿಂದ ಚಿನ್ನಾಭರಣ ಹಾಗೂ ಹಣ ದರೋಡೆ – ಪ್ರಕರಣ ದಾಖಲು

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ, ಕೊಲ್ಪೆದಬೈಲು, ಮಾಲಾಡಿ ಗ್ರಾಮ ಮತ್ತು ಅಂಚೆ, ಬೆಳ್ತಂಗಡಿಯಲ್ಲಿನ ವಸಂತಿ ಹೆಗ್ಡೆ ಇವರ ಮನೆಯ ಮುಂದಿನ ಬಾಗಿಲಿಗೆ ಹಾಕಿರುವ ಬೀಗದ ಕೊಂಡಿಯನ್ನು ಕಳ್ಳರು ಮುರಿದು ಮನೆಯೊಳಗೆ ಪ್ರವೇಶಿಸಿದ್ದಾರೆ. ಕೋಣೆಯ ಕಪಾಟುಗಳಲ್ಲಿದ್ದ ಚಿನ್ನಾಭರಣಗಳನ್ನು ಹಾಗೂ ನಗದು ರೂಪಾಯಿ 30,000/- ಹಣವನ್ನು ಕಳ್ಳರು ಕಳವು ಮಾಡಿದ್ದಾರೆ.

58 ವರ್ಷದ ವಸಂತಿ ಹೆಗ್ಡೆಯವರು ತಮ್ಮ ಮಗ ಹಾಗೂ ಸೊಸೆ ಜೊತೆಗೆ ಎಪ್ರಿಲ್ 20ರಂದು ಮಧ್ಯಾಹ್ನ ಬೆಳ್ತಂಗಡಿಗೆ ಹೋಗಿದ್ದರು. ಸಂಜೆ ವಾಪಸ್ ಮನೆಗೆ ಬರುವಾಗ ಕಳ್ಳತನ ಆದದ್ದು ಬೆಳಕಿಗೆ ಬಂದಿದೆ. ಕಳವಾದ ಚಿನ್ನಾಭರಣಗಳ ಒಟ್ಟು ತೂಕ 160.5 ಗ್ರಾಂ ಆಗಿದ್ದು ಇದರ ಮೌಲ್ಯ ರೂಪಾಯಿ 13,72,000/- ಆಗಿರುತ್ತದೆ. ನಗದು ಸೇರಿ ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂಪಾಯಿ 14,02,000/- ಆಗಿರುತ್ತದೆ. ವಸಂತಿ ಶೆಟ್ಟಿ ನೀಡಿದ ದೂರಿನಂತೆ, ಪುಂಜಾಲಕಟ್ಟೆ ಠಾಣಾ ಅ.ಕ್ರ 25/2025 ಕಲಂ: 331(3), 305   BNS- 2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page