May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಜ್ಪೆ ಚರ್ಚ್ ನ ಯುವಕ ಜೋಶ್ವಾ ಪಿಂಟೊ ಅಪಘಾತದಲ್ಲಿ ಮೃತ್ಯು

ಏಪ್ರಿಲ್ 20ರಂದು ಈಸ್ಟರ್ ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸಿ, ಮಂಗಳೂರಿನಿಂದ ತನ್ನ ಮಿತ್ರರೊಡನೆ ಕಾರಲ್ಲಿ ವಾಪಸ್ ಪೆರ್ಮುದೆಗೆ ಬರುವಾಗ, ಆಕಸ್ಮಿಕ ಅವಘಡ ಸಂಭವಿಸಿ ಬಜ್ಪೆ ಚರ್ಚ್ ನ ಯುವಕ 27 ವರ್ಷ ಪ್ರಾಯದ ಜೋಶ್ವಾ ಪಿಂಟೊ ಮೃತಪಟ್ಟಿದ್ದಾರೆ. ತನ್ನ ಕಾರಲ್ಲಿ ಮಿತ್ರರೊಂದಿಗೆ ಬರುವಾಗ ರಸ್ತೆಯಲ್ಲಿನ ಹೊಂಡಕ್ಕೆ ಕಾರು ಬಡಿದು, ನಿಯಂತ್ರಣ ಕಳೆದುಕೊಂಡು ತಿರುವಿನಲ್ಲಿ ಕಾರು ತಲೆಕೆಳಗಾಗಿ ಮಗುಚಿ ಬಿದ್ದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ತನ್ನ ಸಮುದಾಯದಲ್ಲಿ ನಿಸ್ವಾರ್ಥ ಸೇವೆ ಮಾಡುವ ಜೋಶ್ವಾ ಪಿಂಟೊ ಬಜ್ಪೆ ಚರ್ಚ್ ನ ಸದಸ್ಯರಾಗಿದ್ದರು. ಆತನ ನಾಯಕತ್ವ ಗುಣಗಳಿಗೆ ಹಾಗೂ ಎಲ್ಲರೊಂದಿಗೆ ಸ್ನೇಹದಿಂದ ಇದ್ದ ಇವರನ್ನು ಚರ್ಚಿನವರೆಲ್ಲರೂ ಗೌರವಿಸುತ್ತಿದ್ದರು. ಆತನ ಆಕಸ್ಮಿಕ ಸಾವಿಗೆ ಎಲ್ಲಾ ಕಡೆಯಿಂದಲೂ ಸಂತಾಪ ಸೂಚಕಗಳು ಕುಟುಂಬಕ್ಕೆ ಹರಿದು ಬರುತ್ತಿವೆ. ಅವರ ಅಂತ್ಯಕ್ರಿಯೆಯು ನಾಳೆ ಏಪ್ರಿಲ್ 22ರಂದು ಮಂಗಳವಾರ ಸಾಯಂಕಾಲ 4 ಗಂಟೆಗೆ ಸಂತ ಜೋಸೆಫರ ದೇವಾಲಯ ಬಜಪೆಯಲ್ಲಿ ನಡೆಯಲಿದೆ.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page