May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಗೊನೆ ಮುಹೂರ್ತ

ಬಂಟ್ವಾಳ ತಾಲೂಕು ನೆಟ್ಲಮುಡ್ನೂರು ಹಾಗೂ ಅನಂತಾಡಿ ಉಭಯ ಗ್ರಾಮಗಳಿಗೆ ಸಂಬಂದಪಟ್ಟ ಇತೀಹಾಸ ಪ್ರಸಿದ್ಧ ಕರಿಂಕ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದ ವರ್ಷಾವಧಿ ಜಾತ್ರೆಯು ಬ್ರಹ್ಮ ಶ್ರೀ ವೇ.ಮೂ. ನಿಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿವರ್ಯರ ನೇತೃತ್ವದಲ್ಲಿ ಮೇ 01ರಿಂದ ಗುರುವಾರ ರಾತ್ರಿ ಹಾಗೂ ಮೇ 02ನೇ ಶುಕ್ರವಾರದಂದು ವೈಭವದಿಂದ ನಡೆಯಲಿದ್ದು ಅದರ ಪೂರ್ವಭಾವಿಯಾಗಿ ನಡೆಯುವ ಗೊನೆ ಕಡಿಯುವ ಮೂಹೂರ್ತವನ್ನು ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಇವರು ಇಂದು ಬೆಳಿಗ್ಗೆ 9.45ರ ಸುಮುಹೂರ್ತದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನರೇಂದ್ರ ರೈಯವರು ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯ ಕಿರಣ್ ಹೆಗ್ಡೆ, ಸೇಸಪ್ಪ ಗೌಡ ಉಪಸ್ಥಿತರಿದ್ದರು. ನೆಟ್ಲಮುಡ್ನೂರು ಗ್ರಾಮದ ಶ್ರೀ ಕ್ಷೇತ್ರದ ಭಕ್ತ ಬಿ. ಚೇತನ್ ರೈ, ಡಾ. ಮನೋಹರ ರೈ, ಜಗನ್ನಾಥ ಶೆಟ್ಟಿ ಕರಿಂಕ, ಚೇತನ್ ಶೆಟ್ಟಿ ಹೊಸ ಒಕ್ಲು, ದಾಮೋದರ ಕಾಪಿಕ್ಕಾಡ್, ಜತ್ತಪ್ಪ ಪೂಜಾರಿ, ಕರಿಂಕ ಡೊಂಬಯ್ಯ ಗೌಡ ಕರಿಂಕ ಹಾಗೂ ದೇವಸ್ಥಾನದ ಪ್ರಭಂಧಕರಾದ ಗೌರೀಶ್ ಶೆಟ್ಟಿಯವರು ಉಪಸ್ಥಿತರಿದ್ದರು.

ದಿನಾಂಕ 01-02-205ನೇ ಗುರುವಾರ ರಾತ್ರಿ ಗಂಟೆ 8ರಿಂದ ಮಹೋತ್ಸವ ಬಲಿ, ಭೂತ ಬಲಿ ನಡೆದು ಸಾರ್ವಜನಿಕ ಅನ್ನ ಸಂತರ್ಪಣೆ ನಡೆದು, ಜಿಲ್ಲೆಯ ಹೆಸರಾಂತ ಕಲಾವಿದರಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಮರುದಿನ ಬೆಳಿಗ್ಗೆ ಗಂಟೆ 9.30ರಿಂದ ಹಗಲು ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣದಲ್ಲಿ ಪ್ರಸಾದ ವಿತರಣೆ ನಡೆದು ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆದು, ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ.

ಅಂತೆಯೇ ತಾರೀಕು 12-05-2025 ನೇ ಸೋಮವಾರ ಬೆಳಿಗ್ಗೆ ಗಂಟೆ 9ರಿಂದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಪ್ರಯುಕ್ತ ಗಣಪತಿ ಹೋಮ, ಕಲಶಾಭಿಷೇಕ ನಡೆದು ಸಾರ್ವಜನಿಕ ಅನ್ನ ಸಂತರ್ಪಣೆ ನಡೆದು ರಾತ್ರಿ ಗಂಟೆ 7ರಿಂದ ಮಹಾ ರಂಗಪೂಜೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಕ್ಷೇತ್ರದ ಭಕ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ. ನರೇಂದ್ರ ರೈಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page