May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಪೋಪ್ ಫ್ರಾನ್ಸಿಸ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆಗೆ ಕರೆ 

ಕಿಸ್ತರ ಶಾಂತಿಯಲ್ಲಿ ವಿಶ್ರಾಂತಿ ಪಡೆದ ಕಥೊಲಿಕ ಕ್ರೈಸ್ತ ಸಮುದಾಯದ ಪರಮಪೂಜ್ಯ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರ ಸ್ಮರಣಾರ್ಥ ಏಪ್ರಿಲ್ 25ರಂದು ಶುಕ್ರವಾರ ಸಂಜೆ 5:00 ಘಂಟೆಗೆ ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಪೋಪ್ ಅವರಿಗಾಗಿ ವಿಶೇಷ ಪ್ರಾರ್ಥನೆ ಹಾಗೂ ಬಲಿಪೂಜೆಯನ್ನು ನಡೆಸಲಾಗುವುದು.

ಬಳಿಕ ಚರ್ಚ್ ಮೈದಾನದಲ್ಲಿ ಶೋಕ ಸಭೆಯು ನಡೆಯಲಿರುವುದು. ಮಂಗಳೂರು ಧರ್ಮಕ್ಷೇತ್ರ ಶೋಕ ವ್ಯಕ್ತಪಡಿಸುವ ಜೊತೆಗೆ ದೇವರ ಶಾಶ್ವತ ವಿಶ್ರಾಂತಿಗೆ ಕರೆಯಲ್ಪಟ್ಟ ಪೋಪ್ ಫ್ರಾನ್ಸಿಸ್ ರವರ ಜೀವನವನ್ನು ಪ್ರೇರಣೆಯಾಗಿ ಮುಂದುವರಿಸಲು ನಾವು ಒಟ್ಟಾಗೋಣ. ಸಮಸ್ತ ಜನರಿಗೆ ಭರವಸೆಯ ದಾರಿ ದೀಪವಾದ ಅವರು, ಅವರ ಸಂಪೂರ್ಣ ಬದ್ಧತೆಯ ಜೀವನಕ್ಕಾಗಿ ದೇವರು ಅವರಿಗೆ ಶಾಶ್ವತ ಪ್ರತಿಫಲವನ್ನು ನೀಡಲು, ಮಂಗಳೂರು ಕ್ರೈಸ್ತ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಹಾಗೂ ಭಕ್ತಾದಿಗಳು ನಡೆಸುವ ಶ್ರದ್ಧಾಂಜಲಿ ಸಭೆಗೆ ಪೋಪರ ಸೇವೆ ಸ್ಮರಿಸಿ ಎಲ್ಲರೂ ಹಾಜರಿರಬೇಕೆಂದು ಮಂಗಳೂರು ಧರ್ಮಕ್ಷೇತ್ರದ ಪರವಾಗಿ ವಿನಂತಿಯನ್ನು ಮಾಡಲಾಗಿದೆ.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page