July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹೋಟೆಲ್ ಮೋತಿಮಹಲ್, 1.70 ಎಕ್ರೆ ಜಮೀನು ಹಾಗೂ ರೂಪಾಯಿ 11.50 ಕೋಟಿ ಸಮೇತ ಮಂಗಳೂರು ಧರ್ಮಕ್ಷೇತ್ರದ ಸಂಸ್ಥೆಗೆ ಹಸ್ತಾಂತರಿಸಿದ ಎ.ಜೆ. ಶೆಟ್ಟಿ ಆ್ಯಂಡ್ ಕಂಪೆನಿ

ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ನಿನ್ನೆ ಎಪ್ರಿಲ್ 30ರಂದು ಬುಧವಾರ ಎ.ಜೆ ಶೆಟ್ಟಿ ಆ್ಯಂಡ್ ಕಂಪನಿಯು, ಹೋಟೆಲ್ ಮೋತಿಮಹಲ್ ಕಟ್ಟಡ ಸಮೇತ 1.70 ಎಕ್ರೆ ಜಮೀನು ಹಾಗೂ 11.50 ಕೋಟಿ ರೂಪಾಯಿ ಮೂಲ ಮಾಲಕರಾದ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಸೈಂಟ್ ಆ್ಯಂಟನೀಸ್ ಚಾರಿಟೇಬಲ್ ಟ್ರಸ್ಟಿಗೆ ಕೋರ್ಟ್ ಆದೇಶದಂತೆ ಹಸ್ತಾಂತರಿಸಿತು.

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ಹಾಗೂ ಚಾರಿಟೇಬಲ್ ಟ್ರಸ್ಟ್ ಮೂಲಿ ಹಾಗೂ ಮೂಲಗೇಣಿ ಹಕ್ಕು ಹೊಂದಿರುವ 1.70 ಎಕರೆ ಜಮೀನು ಹಾಗೂ ಅದರಲ್ಲಿರುವ ಮೋತಿಮಹಲ್ ಹೋಟೆಲ್ ಅನ್ನು ಲೀಸ್ಡ್ ಶರ್ತ ಪ್ರಕಾರ ಮೂಲಿಗೆ ಒಪ್ಪಿಸಲು ಹಾಗೂ 2011ರ ನಂತರ ಅಂದರೆ ಲೀಸ್ ಅವಧಿ ಮುಗಿದ ಬಳಿಕವೂ ಸ್ವಾಧೀನವನ್ನು ಎ.ಜೆ. ಶೆಟ್ಟಿ ಆ್ಯಂಡ್ ಕಂಪೆನಿ ಬಿಟ್ಟು ಕೊಡದ ಕಾರಣಕ್ಕಾಗಿ ಸೈಂಟ್ ಆ್ಯಂಟನೀಸ್ ಚಾರಿಟೇಬಲ್ ಟ್ರಸ್ಟ್ ಗೆ 11.50 ಕೋಟಿ ರೂಪಾಯಿಗಳನ್ನು ಎಪ್ರಿಲ್ 30ರ ಒಳಗೆ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಿನ್ನೆ ಎಪ್ರಿಲ್ 30ರಂದು 1.70 ಎಕ್ರೆ ಜಮೀನು ಅದರಲ್ಲಿರುವ ಕಟ್ಟಡ ಹಾಗೂ 11.50 ಕೋಟಿ ರೂಪಾಯಿ ಹಸ್ತಾಂತರಿಸುವ ಮೂಲಕ ಕೋರ್ಟ್ ಆದೇಶಕ್ಕೆ ಎ.ಜೆ. ಶೆಟ್ಟಿ ಆ್ಯಂಡ್ ಕಂಪೆನಿ ಗೌರವಿಸಿತು.

ಸೈಂಟ್ ಆ್ಯಂಟನೀಸ್ ಚಾರಿಟೇಬಲ್ ಟ್ರಸ್ಟ್ ಪರವಾಗಿ ವಕೀಲರಾದ ಎಂ.ಪಿ. ನೊರೊನ್ಹಾ ಹಾಗೂ ವಂದನೀಯ ಫಾದರ್ ಜೆ.ಬಿ. ಕ್ರಾಸ್ತ ಉಪಸ್ಥಿತರಿದ್ದರು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page