May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹೋಟೆಲ್ ಮೋತಿಮಹಲ್, 1.70 ಎಕ್ರೆ ಜಮೀನು ಹಾಗೂ ರೂಪಾಯಿ 11.50 ಕೋಟಿ ಸಮೇತ ಮಂಗಳೂರು ಧರ್ಮಕ್ಷೇತ್ರದ ಸಂಸ್ಥೆಗೆ ಹಸ್ತಾಂತರಿಸಿದ ಎ.ಜೆ. ಶೆಟ್ಟಿ ಆ್ಯಂಡ್ ಕಂಪೆನಿ

ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ನಿನ್ನೆ ಎಪ್ರಿಲ್ 30ರಂದು ಬುಧವಾರ ಎ.ಜೆ ಶೆಟ್ಟಿ ಆ್ಯಂಡ್ ಕಂಪನಿಯು, ಹೋಟೆಲ್ ಮೋತಿಮಹಲ್ ಕಟ್ಟಡ ಸಮೇತ 1.70 ಎಕ್ರೆ ಜಮೀನು ಹಾಗೂ 11.50 ಕೋಟಿ ರೂಪಾಯಿ ಮೂಲ ಮಾಲಕರಾದ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಸೈಂಟ್ ಆ್ಯಂಟನೀಸ್ ಚಾರಿಟೇಬಲ್ ಟ್ರಸ್ಟಿಗೆ ಕೋರ್ಟ್ ಆದೇಶದಂತೆ ಹಸ್ತಾಂತರಿಸಿತು.

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ಹಾಗೂ ಚಾರಿಟೇಬಲ್ ಟ್ರಸ್ಟ್ ಮೂಲಿ ಹಾಗೂ ಮೂಲಗೇಣಿ ಹಕ್ಕು ಹೊಂದಿರುವ 1.70 ಎಕರೆ ಜಮೀನು ಹಾಗೂ ಅದರಲ್ಲಿರುವ ಮೋತಿಮಹಲ್ ಹೋಟೆಲ್ ಅನ್ನು ಲೀಸ್ಡ್ ಶರ್ತ ಪ್ರಕಾರ ಮೂಲಿಗೆ ಒಪ್ಪಿಸಲು ಹಾಗೂ 2011ರ ನಂತರ ಅಂದರೆ ಲೀಸ್ ಅವಧಿ ಮುಗಿದ ಬಳಿಕವೂ ಸ್ವಾಧೀನವನ್ನು ಎ.ಜೆ. ಶೆಟ್ಟಿ ಆ್ಯಂಡ್ ಕಂಪೆನಿ ಬಿಟ್ಟು ಕೊಡದ ಕಾರಣಕ್ಕಾಗಿ ಸೈಂಟ್ ಆ್ಯಂಟನೀಸ್ ಚಾರಿಟೇಬಲ್ ಟ್ರಸ್ಟ್ ಗೆ 11.50 ಕೋಟಿ ರೂಪಾಯಿಗಳನ್ನು ಎಪ್ರಿಲ್ 30ರ ಒಳಗೆ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಿನ್ನೆ ಎಪ್ರಿಲ್ 30ರಂದು 1.70 ಎಕ್ರೆ ಜಮೀನು ಅದರಲ್ಲಿರುವ ಕಟ್ಟಡ ಹಾಗೂ 11.50 ಕೋಟಿ ರೂಪಾಯಿ ಹಸ್ತಾಂತರಿಸುವ ಮೂಲಕ ಕೋರ್ಟ್ ಆದೇಶಕ್ಕೆ ಎ.ಜೆ. ಶೆಟ್ಟಿ ಆ್ಯಂಡ್ ಕಂಪೆನಿ ಗೌರವಿಸಿತು.

ಸೈಂಟ್ ಆ್ಯಂಟನೀಸ್ ಚಾರಿಟೇಬಲ್ ಟ್ರಸ್ಟ್ ಪರವಾಗಿ ವಕೀಲರಾದ ಎಂ.ಪಿ. ನೊರೊನ್ಹಾ ಹಾಗೂ ವಂದನೀಯ ಫಾದರ್ ಜೆ.ಬಿ. ಕ್ರಾಸ್ತ ಉಪಸ್ಥಿತರಿದ್ದರು.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page