May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಇಂದು ಸಹಜ ಸ್ಥಿತಿಗೆ

ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ಮೇ 2ರಂದು ಶುಕ್ರವಾರ ಮಂಗಳೂರು ಬಂದ್ ಆಗಿತ್ತು. ಇಂದು ಮೇ 3ರಂದು ಶನಿವಾರ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸಹಜ ಸ್ಥಿತಿಗೆ ತಲುಪಿದೆ. ನಿನ್ನೆ ಸಂಜೆಯಿಂದಲೇ ಮಂಗಳೂರಿನ ವಿವಿಧೆಡೆಗಳಲ್ಲಿ ಕೆಲವೊಂದು ಅಂಗಡಿಗಳು ತೆರೆದಿದ್ದವು. ಶುಕ್ರವಾರ ಬಂದ್ ನ ಸರಿಯಾದ ಮಾಹಿತಿ ಇಲ್ಲದ ಕಾರಣ ಸಾಕಷ್ಟು ಜನರು ತೊಂದರೆಗೀಡಾಗಿದ್ದರು. ಸಂಜೆ ವೇಳೆ ಅಲ್ಲಲ್ಲಿ ತೆರೆದಿರುವ ಅಂಗಡಿಗಳಿಗೆ ಜನರು ಅಗತ್ಯ ವಸ್ತುಗಳಿಗಾಗಿ ಮುಗಿಬಿದ್ದ ದೃಶ್ಯ ಕಂಡು ಬಂದಿತ್ತು.

ಇಂದು ಬೆಳಗ್ಗಿನಿಂದಲೇ ಸರ್ಕಾರಿ ಮತ್ತು ಖಾಸಗಿ ಬಸ್ ಗಳು ಸಂಚಾರ ಆರಂಭಿಸಿದೆ. ಆಟೋ, ಟೆಂಪೋ ಸೇರಿದಂತೆ ಎಲ್ಲ ವಾಹನಗಳು ರಸ್ತೆಗಿಳಿದಿವೆ. ಶುಕ್ರವಾರದ ಬಂದ್ ವೇಳೆ ವಾಹನ ಸಂಚಾರ ಹೆಚ್ಚಾಗಿ ಇರಲಿಲ್ಲ, ಅಂಗಡಿಗಳು ಕೂಡ ತೆರೆದಿರಲಿಲ್ಲ. ನಿನ್ನೆ ಬಂದ್ ನಿಂದಾಗಿ ಸಾಕಷ್ಟು ಜನರು ತೊಂದರೆಗೀಡಾಗಿದ್ದರು. ಏಕಾಏಕಿ ಮಂಗಳೂರಿನಲ್ಲಿ ಬಂದ್ ಆಚರಿಸಿರುವುದಕ್ಕೆ ಸಾಕಷ್ಟು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಗಲಾಟೆಗಳು ನಡೆಯಬಹುದು ಎನ್ನುವ ಭೀತಿಯಿಂದ ಸಾಕಷ್ಟು ಅಂಗಡಿಗಳ ಮಾಲಿಕರು ಅಂಗಡಿ ಬಂದ್ ಮಾಡಿರುವುದು ಕಂಡು ಬಂತು.

 

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page