July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಇಂದು ಸಹಜ ಸ್ಥಿತಿಗೆ

ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ಮೇ 2ರಂದು ಶುಕ್ರವಾರ ಮಂಗಳೂರು ಬಂದ್ ಆಗಿತ್ತು. ಇಂದು ಮೇ 3ರಂದು ಶನಿವಾರ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸಹಜ ಸ್ಥಿತಿಗೆ ತಲುಪಿದೆ. ನಿನ್ನೆ ಸಂಜೆಯಿಂದಲೇ ಮಂಗಳೂರಿನ ವಿವಿಧೆಡೆಗಳಲ್ಲಿ ಕೆಲವೊಂದು ಅಂಗಡಿಗಳು ತೆರೆದಿದ್ದವು. ಶುಕ್ರವಾರ ಬಂದ್ ನ ಸರಿಯಾದ ಮಾಹಿತಿ ಇಲ್ಲದ ಕಾರಣ ಸಾಕಷ್ಟು ಜನರು ತೊಂದರೆಗೀಡಾಗಿದ್ದರು. ಸಂಜೆ ವೇಳೆ ಅಲ್ಲಲ್ಲಿ ತೆರೆದಿರುವ ಅಂಗಡಿಗಳಿಗೆ ಜನರು ಅಗತ್ಯ ವಸ್ತುಗಳಿಗಾಗಿ ಮುಗಿಬಿದ್ದ ದೃಶ್ಯ ಕಂಡು ಬಂದಿತ್ತು.

ಇಂದು ಬೆಳಗ್ಗಿನಿಂದಲೇ ಸರ್ಕಾರಿ ಮತ್ತು ಖಾಸಗಿ ಬಸ್ ಗಳು ಸಂಚಾರ ಆರಂಭಿಸಿದೆ. ಆಟೋ, ಟೆಂಪೋ ಸೇರಿದಂತೆ ಎಲ್ಲ ವಾಹನಗಳು ರಸ್ತೆಗಿಳಿದಿವೆ. ಶುಕ್ರವಾರದ ಬಂದ್ ವೇಳೆ ವಾಹನ ಸಂಚಾರ ಹೆಚ್ಚಾಗಿ ಇರಲಿಲ್ಲ, ಅಂಗಡಿಗಳು ಕೂಡ ತೆರೆದಿರಲಿಲ್ಲ. ನಿನ್ನೆ ಬಂದ್ ನಿಂದಾಗಿ ಸಾಕಷ್ಟು ಜನರು ತೊಂದರೆಗೀಡಾಗಿದ್ದರು. ಏಕಾಏಕಿ ಮಂಗಳೂರಿನಲ್ಲಿ ಬಂದ್ ಆಚರಿಸಿರುವುದಕ್ಕೆ ಸಾಕಷ್ಟು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಗಲಾಟೆಗಳು ನಡೆಯಬಹುದು ಎನ್ನುವ ಭೀತಿಯಿಂದ ಸಾಕಷ್ಟು ಅಂಗಡಿಗಳ ಮಾಲಿಕರು ಅಂಗಡಿ ಬಂದ್ ಮಾಡಿರುವುದು ಕಂಡು ಬಂತು.

 

You may also like

News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ
News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು

You cannot copy content of this page