September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗಾಯಗೊಂಡ ನೌಶಾದ್ ರನ್ನು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜರವರು ಆಸ್ಪತ್ರೆಯಲ್ಲಿ ಭೇಟಿ – ಪರಿಹಾರದ ಭರವಸೆ

ಮೇ 2ರಂದು ಶುಕ್ರವಾರ ರಾತ್ರಿ 3:30 ಗಂಟೆಗೆ ಕಣ್ಣೂರು ನಿವಾಸಿ ನೌಶಾದ್ ಎಂಬುವರಿಗೆ ಚೂರಿ ಇರಿತದಿಂದ ಗಂಭೀರ ಗಾಯಗಳಾಗಿತ್ತು. ಅವರು ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದೇಶಿ ಪ್ರವಾಸದಲ್ಲಿದ್ದ MLC ಐವನ್ ಡಿಸೋಜರವರು ಇಂದು ಮೇ 4ರಂದು ಆದಿತ್ಯವಾರ ಮಂಗಳೂರಿಗೆ ಆಗಮಿಸಿದ ದಿನದಂದೇ ಯುನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೌಶಾದ್ ರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಸರಕಾರದಿಂದ ಸಿಗುವ ಪರಿಹಾರವನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಕೂಡಲೇ ಒದಗಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ಅಶ್ರಫ್ ಬಂದರ್, ಇಮ್ರಾನ್ ಕುದ್ರೋಳಿ, ಸಲೀಂ, ಸಲೀಹ್ ಬಜ್ಪೆ, ನವಾಜ್ ಜೆಪ್ಪು, ಹಬೀಬುಲ್ಲಾ ಕಣ್ಣೂರು, ಮಾಜಿ ಮನಪಾ ಸದಸ್ಯರು ಬಾಸ್ಕರ್ ರಾವ್, ನಜೀರ್ ಬಜಾಲ್ ಹಾಗೂ ಇತರರು ಉಪಸ್ಥಿತರಿದ್ದರು.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page