July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮಸ್ಥಳದಲ್ಲಿ ದೇವರ ದರ್ಶನ ಮಾಡಿ ಬರುವಷ್ಟರಲ್ಲಿ 7 ಲಕ್ಷದ ಚಿನ್ನ ನಾಪತ್ತೆ – ಪ್ರಕರಣ ದಾಖಲು

ಆಂಧ್ರಪ್ರದೇಶದ ನೆಲ್ಲೂರಿನ 47ವರ್ಷ ಪ್ರಾಯದ ಜೆ. ಲತಾ ಎಂಬವರು ಧರ್ಮಸ್ಥಳದಲ್ಲಿ ದೇವರ ದರ್ಶನ ಮಾಡಲು ಬಾಡಿಗೆ ಇನ್ನೋವಾ ಕಾರಿನಲ್ಲಿ ಮೇ 2ರಂದು ನೆಲ್ಲೂರಿನಿಂದ ಹೊರಟು ಮೇ 3ರಂದು ಧರ್ಮಸ್ಥಳ ತಲುಪಿದ್ದರು. ದೇವರ ದರ್ಶನಕ್ಕೆ ಹೋಗುವ ಮೊದಲು ಜೆ. ಲತಾ ಅವರು ಕಾರ್ಯಕ್ರಮಕ್ಕೆ ಎಂದು ಜೊತೆಯಲ್ಲಿ ತಂದಿದ್ದ ಚಿನ್ನಭರಣಗಳಾದ ಬ್ರೇಸ್ ಲೆಟ್, ಚಿನ್ನದ ಚೈನ್, ನೆಕ್ಲೇಸ್ ಅನ್ನು ವ್ಯಾನಿಟಿಕ್ ಬ್ಯಾಗ್ ನ ಒಳಗಡೆ ಪ್ಲಾಸ್ಟಿಕ್ ಡಬ್ಬದಲ್ಲಿ ಹಾಕಿ ಬ್ಯಾಗ್ ನಲ್ಲಿ ಇಟ್ಟುಕೊಂಡಿದ್ದರು.

ದೇವರ ದರ್ಶನವನ್ನು ಮುಗಿಸಿ ಹೊರಡುವ ಸಮಯದಲ್ಲಿ ಬ್ಯಾಗನ್ನು ನೋಡಿದಾಗ ವ್ಯಾನಿಟಿಕ್ ಬ್ಯಾಗಿನ ಜಿಪ್ ತೆರೆದಿದ್ದು, ಆತಂಕದಿಂದ ಬ್ಯಾಗ್ ನ ಒಳಗಡೆ ನೋಡಿದಾಗ ಬ್ಯಾಗ್ ನ ಒಳಗಡೆ ಪ್ಲಾಸ್ಟಿಕ್ ಬಾಕ್ಸ್ ನಲ್ಲಿ ಇಟ್ಟಿದ್ದ 97 ಗ್ರಾಮ್ ತೂಕದ ಚಿನ್ನಾಭರಣಗಳು ಕಳವಾಗಿದ್ದು ಗಮನಕ್ಕೆ ಬಂತು. ಕಳವಾದ ಚಿನ್ನದ ಒಟ್ಟು ಮೌಲ್ಯ ರೂಪಾಯಿ 6,79,000/- ಆಗಿರುತ್ತದೆ.

ಪಿರ್ಯಾಧಿದಾರರಾದ 47ವರ್ಷ ಪ್ರಾಯದ ಜೆ. ಲತಾ, ವಾಸ: ಶ್ರೀ ನಗರ ಕಾಲೋನಿ, ಸಾಯಿ ಹೃದಯ ಟೆಂಪಲ್ ಗೋಮತಿ ನಗರ ನೆಲ್ಲೂರು ಜಿಲ್ಲೆ ಆಂದ್ರಪ್ರದೇಶ ಎಂಬವರ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆ ಅ.ಕ್ರ.  17/2025 ಕಲಂ: 303(2) ಬಿಎನ್ ಎಸ್ 2023ಯಂತೆ ಪ್ರಕರಣ ದಾಖಲಾಗಿರುತ್ತದೆ.

You may also like

News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ
News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು

You cannot copy content of this page