May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆಸ್ತಿ ನೋಂದಣಿಯಲ್ಲಿ ಮತ್ತೊಂದು ಹೊಸ ನಿಯಮ

ನಿಯಮ ಪಾಲಿಸದಿದ್ದರೆ ಆಸ್ತಿ ವರ್ಗಾವಣೆ ಆಗುವುದಿಲ್ಲ!

ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮತ್ತೊಂದು ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ ನಿಯಮ ಪಾಲಿಸದೇ ಇದ್ದರೆ, ನಿಮ್ಮ ಪರಭಾರೆ, ಆಸ್ತಿ ವರ್ಗಾವಣೆ ನೋಂದಣಿಯೇ ಆಗುವುದಿಲ್ಲ. ರೂಪಾಯಿ 30 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿ ಖರೀದಿ ನೋಂದಣಿಯ ವೇಳೆ ಮಾರಾಟಗಾರರು ಮತ್ತು ಖರೀದಿದಾರರು ತಮ್ಮ ಪಾನ್ (PAN) ವಿವರವನ್ನು ಸಲ್ಲಿಸುವುದನ್ನು ಕಡ್ಡಾಯ ಮಾಡಲಾಗಿದೆ. ಮುದ್ರಾಂಕ ಆಯುಕ್ತರು ಮೇ 16 ರಂದು ರಾಜ್ಯದ ಎಲ್ಲಾ ಜಿಲ್ಲಾ ನೋಂದಣಾಧಿಕಾರಿಗಳು ಮತ್ತು ಉಪ ನೊಂದನಾಧಿಕಾರಿ ಕಚೇರಿಗಳಿಗೆ ಈ ಬಗ್ಗೆ ಸುತ್ತೋಲೆಯನ್ನು ಹೊರಡಿಸಿದ್ದಾರೆ. 30 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿ, ನೋಂದಣಿಗೆ ಸಂಬಂಧಿಸಿದಂತೆ ಮಾರಾಟಗಾರರು ಮತ್ತು ಖರೀದಿದಾರರ ವಿವರಗಳನ್ನು ಆರ್ಥಿಕ ವರ್ಷದ ಅಂತ್ಯಕ್ಕೆ ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಆಸ್ತಿ ನೋಂದಣಿ ವೇಳೆ ಸಲ್ಲಿಸಬೇಕಾಗಿರುವ ದಾಖಲೆಗಳು ಮತ್ತು ಸ್ವಯಂ ಘೋಷಣಾ ಪತ್ರದ ವಿವರಗಳನ್ನು ಸುತ್ತೋಲೆ ಒಳಗೊಂಡಿದೆ. ಈ ಎಲ್ಲಾ ವಿವರ ಮತ್ತು ಮಾಹಿತಿಗಳನ್ನು ಸಲ್ಲಿಸಿದರೆ ಮಾತ್ರ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡು ದಸ್ತಾವೇಜನ್ನು ಹಸ್ತಾಂತರಿಸಬೇಕು. ಇಲ್ಲದಿದ್ದರೆ ದಸ್ತಾವೇಜು ನೀಡಬಾರದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಮಾರಾಟಗಾರರು ಮತ್ತು ಖರೀದಿದಾರರು ಈ ಮಾಹಿತಿಗಳನ್ನು ಸಲ್ಲಿಸಲು ಪ್ರತ್ಯೇಕ ನಮೂನೆಯನ್ನು ರೂಪಿಸಿದ್ದು, ಅದರಲ್ಲಿ ಮಾರಾಟದ ಕುರಿತ ಎಲ್ಲ ವಿವರಗಳನ್ನು ಸಲ್ಲಿಸಬೇಕು. ಆ ಬಳಿಕ ನಿಗದಿತ ನಮೂನೆಗೆ ಸಹಿ ಮಾಡಿ ಸ್ಕ್ಯಾನ್ ಮಾಡಬೇಕು. ಅದನ್ನು ಕಾವೇರಿ-2 ತಂತ್ರಾಂಶಕ್ಕೆ ಅಪ್ಲೋಡ್ ಮಾಡಬೇಕು. ಇಡೀ ಆರ್ಥಿಕ ವರ್ಷದಲ್ಲಿ ನೋಂದಣಿಯಾದ ಆಸ್ತಿ ವಹಿವಾಟು ಮಾರಾಟ ಮತ್ತು ಖರೀದಿದಾರರ ವಿವರವನ್ನು 61ಎ ನಮೂನೆಯಲ್ಲಿ ಆದಾಯ ತೆರಿಗೆ ಇಲಾಖೆಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಹೆಸರು, ತಂದೆ/ತಾಯಿಯ ಹೆಸರು, ಹಣ ವರ್ಗಾವಣೆಯ ವಿವರ, ಪಾನ್ ಸಂಖ್ಯೆ, ಆಧಾರ್ ಸಂಖ್ಯೆ, ಪೂರ್ಣ ವಿಳಾಸ, ಸಂಪರ್ಕ ಸಂಖ್ಯೆ ಮತ್ತು ಪರ್ಯಾಯ ಸಂಪರ್ಕ ಸಂಖ್ಯೆ ಮತ್ತು ನಮೂನೆ 60.

ಆಸ್ತಿ ಖರೀದಿ ವಿವರವನ್ನು ಆದಾಯ ತೆರಿಗೆ ಇಲಾಖೆಗೆ ಸಲ್ಲಿಸುವುದು ಬಹಳ ಹಿಂದಿನಿಂದಲೇ ಜಾರಿಯಲ್ಲಿತ್ತು. ಆದರೆ ಇಲಾಖೆಯ ಅಧಿಕಾರಿಗಳು ಈ ವಿವರಗಳನ್ನು ಆದಾಯ ತೆರಿಗೆ ಇಲಾಖೆಗೆ ಸಲ್ಲಿಸುತ್ತಿರಲಿಲ್ಲ. ಈ ಬಗ್ಗೆ ಆದಾಯ ತೆರಿಗೆ ಇಲಾಖೆಯಿಂದ ಆಕ್ಷೇಪ ಪತ್ರಗಳು ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ವಿವರ ಸಲ್ಲಿಕೆಯನ್ನು ಕಟ್ಟುನಿಟ್ಟಾಗಿ ಮತ್ತು ಕಡ್ಡಾಯವಾಗಿ ಅನುಷ್ಠಾನಕ್ಕೆ ತರಲಾಗುತ್ತಿದೆ. ಆದಾಯ ತೆರಿಗೆ ವಂಚನೆ ಪ್ರಕರಣಗಳಿಗೂ ಇದರಿಂದ ತೆರೆ ಬೀಳಲಿದೆ ಎಂದು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಆಯುಕ್ತರು ಮಾಹಿತಿ ನೀಡಿದ್ದಾರೆ.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page