April 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಿಫ್ತಾಉಲ್ ಉಲೂಂ ಮದ್ರಸಾದಲ್ಲಿ ಅದ್ದೂರಿಯಾಗಿ ನಡೆದ ಬೇಸಿಗೆ ರಜಾ ಶಿಬಿರ – 2025

ಮಾಣಿ ಇಲ್ಲಿನ ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿ ಅಧೀನದ ಮಿಫ್ತಾಉಲ್ ಉಲೂಂ ಮದ್ರಸಾದಲ್ಲಿ ಆರು ದಿನಗಳ ಬೇಸಿಗೆ ರಜಾ ಶಿಬಿರ – 2025 ಎಂಬ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ವಿದ್ಯಾರ್ಥಿಗಳಲ್ಲಿ ಮತ್ತಷ್ಟು ಹುಮ್ಮಸ್ಸು ಹೆಚ್ಚಿಸುವ ಉದ್ದೇಶದಿಂದ ಈ ಶಿಬಿರವನ್ನು ನಡೆಸಲಾಯಿತು. ಶಿಬಿದವನ್ನು ಅಧ್ಯಕ್ಷ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಉದ್ಘಾಟಿಸಿದರು, ಹಸೈನಾರ್ ಸ‌ಅದಿ ಪೆರ್ಲ, ನಾಸಿರ್ ಸ‌ಅದಿ ನೇರಳಕಟ್ಟೆ, ಹನೀಫ್ ಸ‌ಅದಿ ಸೆರ್ಕಳ, ಮುಸ್ತಫಾ ಸ‌ಅದಿ ರಿಯಾದ್, ತರಗತಿಗಳನ್ನು ನಡೆಸಿಕೊಟ್ಟರು.

ಶಿಬಿರದಲ್ಲಿ ಮೋಟಿವೇಶನ್ ಸಹಿತ ವಿವಿಧ ತರಗತಿಗಳು, ಕ್ವಿಝ್, ಸ್ಪರ್ಧೆಗಳೊಂದಿಗೆ ಬಹುಮಾನ ಮತ್ತು ಸ್ಮರಣಿಕೆ ವಿತರಣೆ ನಡೆಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಯಿತು. ಮದ್ರಸಾ ಸಮಿತಿಯ ಚೆಯರ್‌ಮೆನ್ ಹನೀಫ್ ಸಂಕ, ಕನ್ವೀನರ್ ಅಝೀಂ ನೆಲ್ಲಿಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಸೀದಿ ಪ್ರಧಾನ ಕಾರ್ಯದರ್ಶಿ ಅಮೀರುದ್ದೀನ್, ಸದಸ್ಯರುಗಳಾದ ಅಬ್ದುಲ್ ಕರೀಂ ನೆಲ್ಲಿ, ಹಂಝ ಕಾಯರಡ್ಕ, ಅಶ್ರಫ್ ಸಖಾಫಿ, ಮದ್ರಸಾ ಸಮಿತಿ ಸದಸ್ಯರುಗಳಾದ ನಾಸಿರ್ ಬದ್ರಿಯಾ ಗ್ರೌಂಡ್, ಅಬ್ದುರ್ರಹ್ಮಾನ್ ಪುತ್ತು, ಇಬ್ರಾಹಿಂ ನೆಲ್ಲಿ ಮುಂತಾದವರು ಉಪಸ್ಥಿತರಿದ್ದರು.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page