August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ವತಿಯಿಂದ ಪೀಡಿಯಾಕಾನ್ – 2025 ಪ್ರಾದೇಶಿಕ ಸಮ್ಮೇಳನ

ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್ ಅಧೀನದಲ್ಲಿರುವ ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ವತಿಯಿಂದ ಸ್ವಿಫ್ಟ್ ಹ್ಯಾಂಡ್ಸ್-ಸೇಫ್‌ಗಾರ್ಡಿಂಗ್ ಲಿಟಲ್ ಲೈವ್ಸ್ ಎಂಬ ಧ್ಯೇಯದಡಿ ಪೀಡಿಯಾಕಾನ್-2025 ಪ್ರಾದೇಶಿಕ ಸಮ್ಮೇಳನ ಕಾಲೇಜಿನ ಫ್ಲೋರೆನ್ಸ್ ನೈಂಟಿಗೇಲ್ ಸಭಾಂಗಣದಲ್ಲಿ ನಡೆಯಿತು.

ಮಕ್ಕಳ ತುರ್ತು ಚಿಕಿತ್ಸೆಯ ಸಂದರ್ಭದಲ್ಲಿ ನರ್ಸ್ ಗಳ ಕೌಶಲ್ಯ ವೃದ್ಧಿಯ ದೃಷ್ಟಿಯಿಂದ ಆಯೋಜಿಸಿದ್ದ ಈ ಸಮ್ಮೇಳನದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿ ಫಾದರ್ ಮುಲ್ಲರ್ ಹೆಲ್ತ್ ಕೇರ್ ಸಿಮ್ಯುಲೇಶನ್ ಎಜ್ಯುಕೇಶನ್‌ನ ಮುಖ್ಯಸ್ಥ ಡಾ| ಲುಲು ಶರೀಫ್ ಮಹ್ಮೂದ್ ರವರು, ಗರ್ಭಾಶಯದಿಂದ ನವಜಾತ ಶಿಶುವಿನವರೆಗಿನ ಸೂಕ್ಷ್ಮ ಆರೈಕೆಯ ಕುರಿತು ವಿವರಿಸಿದರು.

ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಶನ್ಸ್ ನ ನಿರ್ದೇಶಕ ವಂದನೀಯ ಫಾದರ್ ರಿಚ್ಚಾರ್ಡ್ ಅಲೋಶಿಯಸ್ ಕುವೆಲ್ಲೊ ಮಾತನಾಡಿ ತುರ್ತು ಸಂದರ್ಭಗಳಲ್ಲಿ ಮಕ್ಕಳ ಆರೈಕೆ, ಆರೋಗ್ಯದ ಸಮಯೋಚಿತ ನಿರ್ವಹಣೆ ಅತಿ ಅಗತ್ಯವಾಗಿದೆ ಎಂದರು.

ಸಮಾರಂಭದಲ್ಲಿ ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಶನ್ಸ್ ನ ನಿಯೋಜಿತ ನಿರ್ದೇಶಕ ವಂದನೀಯ ಫಾದರ್ ಪಾವುಸ್ತಿನ್ ಲುಕಾಸ್ ಲೋಬೊ, ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ವಂದನೀಯ ಫಾದರ್ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ, ವೈದ್ಯಕೀಯ ಅಧೀಕ್ಷಕ ಡಾ| ಕಿರಣ್ ಶೆಟ್ಟಿ, ಆಯೋಜನಾ ಸಮಿತಿ ಕಾರ್ಯದರ್ಶಿ ಜಾಯ್ಸ್ ಫೆನಾಂಡಿಸ್ ಉಪಸ್ಥಿತರಿದ್ದರು. ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಭಗಿನಿ ಡಾ| ಜೂಡಿ ಸ್ವಾಗತಿಸಿದರು. ಆಯೋಜನಾ ಸಮಿತಿಯ ಜಾನೆಟ್ ಸಿಕ್ವೇರಾ ವಂದಿಸಿದರು. ಸಹ ಪ್ರಾಧ್ಯಾಪಕಿ ಡಾ| ಎಡ್ವಿನಾ ಫಿಲಿಪ್ ಮೊನಿಸ್ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಪ್ರಿನ್ಸಿಟಾ ಡಿಸೋಜ ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ಕಾಲೇಜುಗಳ ಒಟ್ಟು 211 ಮಂದಿ ಪ್ರತಿನಿಧಿಗಳು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page