September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮತೀಯ ಗಲಭೆ ಹಾಗೂ ನೈತಿಕ ಪೊಲೀಸ್ ಗಿರಿ ಹತ್ತಿಕುವೆ – ಹೊಸ ಪ್ರಭಾರ ಪೊಲೀಸ್ ಅಧೀಕ್ಷಕ  ಡಾ. ಅರುಣ್ ಕೆ.

ಸಾರ್ವಜನಿಕರು ನೇರವಾಗಿ ಮತ್ತು ಮುಕ್ತವಾಗಿ ಮಾಹಿತಿ ನೀಡಲು ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ಅಧೀಕ್ಷಕರಾಗಿ ಇಂದು ಮೇ 30ರಂದು ಬೆಳಿಗ್ಗೆ ಡಾ. ಅರುಣ್ ಕೆ. ರವರು ಅಧಿಕಾರ ಸ್ವೀಕರಿಸಿದರು. ತಮ್ಮ ಮೊದಲ ಪತ್ರಿಕಾ ಪ್ರಕಟಣೆಯಲ್ಲಿ ಮತೀಯ ಪ್ರಕರಣಗಳನ್ನು ಹಾಗೂ ನೈತಿಕ ಪೊಲೀಸ್ ಗಿರಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು.

ಅದೇ ರೀತಿ ರೌಡಿ ಶೀಟರ್ ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗೋಹತ್ಯೆ/ಸಾಗಾಟ, ಮಾದಕ ಪದಾರ್ಥಗಳ ಸಾಗಾಟ/ಮಾರಾಟ/ಸೇವನೆ, ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.

ಈ ವಿಚಾರವಾಗಿ ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ಹಾಗೂ ಮುಕ್ತವಾಗಿ ಮೊಬೈಲ್ ಸಂಖ್ಯೆ: 9480805301 ಅಥವಾ ಕಛೇರಿ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ. ಐಪಿಎಸ್ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page