September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದಾಗ ಕರೆಂಟ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಗುರುವಾಯನಕೆರೆ ಸಮೀಪದ ಪಣೆಜಾಲು ಎಂಬಲ್ಲಿ ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದ ಸಹಾಯಕ ಲೈನ್ ಮ್ಯಾನ್ ವಿದ್ಯುತ್ ಆಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಮೃತಪಟ್ಟವರನ್ನು ಓಡಿಲ್ನಾಳ ನಿವಾಸಿ ವಿಜೇಶ್ ಎಂದು ಗುರುತಿಸಲಾಗಿದೆ. ಗುರುವಾಯನಕೆರೆ ಸಮೀಪದ ಪಣೆಜಾಲು ಎಂಬಲ್ಲಿ ವಿದ್ಯುತ್ ಪರಿವರ್ತಕದಲ್ಲಿ ಉಂಟಾಗಿದ್ದ ತೊಂದರೆಯನ್ನು ಸರಿಪಡಿಸಲು ಅವರು ಕಂಬವೇರಿದ್ದರು. ಕೆಲಸ ನಿರ್ವಹಿಸಲು ಜಿಒಎಸ್‌ನಲ್ಲಿ ವಿದ್ಯುತ್ ಕಡಿತಗೊಳಿಸಿ ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜಿಒಎಸ್‌ನಲ್ಲಿ ಸರಿಯಾಗಿ ವಿದ್ಯುತ್ ಕಡಿತಗೊಳ್ಳದ ಕಾರಣ ಈ ದುರಂತ ನಡೆದಿದೆ ಎಂದು ತಿಳಿದು ಬಂದಿದೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page