August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಂತೂರು ಜಂಕ್ಷನ್ ನಲ್ಲಿ ಎಡಕ್ಕೆ ತಿರುಗುವ ವಾಹನಗಳ ಸಂಚಾರ ಮುಕ್ತ

ನಂತೂರು ಜಂಕ್ಷನ್ ನಲ್ಲಿ [ಫ್ರೀ ಲೆಫ್ಟ್] ಮುಕ್ತ ಎಡ ತಿರುವು ಇಲ್ಲದೆ ದೀರ್ಘಕಾಲದಿಂದ ಟ್ರಾಫಿಕ್ ಜಾಮ್ ದೈನಂದಿನ ಸಮಸ್ಯೆಯಾಗಿತ್ತು.  ಆದರೆ ಜೂನ್ 7ರಿಂದ ಶನಿವಾರ ಟ್ರಾಫಿಕ್ ಸಿಗ್ನಲ್ ಗಳೇ ಇಲ್ಲದೆ ವಾಹನಗಳಿಗೆ ಸುಗಮ ಎಡ ತಿರುಗುಗಳ ನಿರ್ಮಾಣವು ಪೂರ್ಣಗೊಂಡಿದೆ. ಆದುದರಿಂದ ರಾಷ್ಟ್ರೀಯ ಹೆದ್ದಾರಿ 66 ಸುರತ್ಕಲ್ ನಿಂದ ರಾಷ್ಟ್ರೀಯ ಹೆದ್ದಾರಿ 75 ಬಿ.ಸಿ. ರೋಡ್ ಕಡೆಗೆ ಸಿಗ್ನಲ್ ಕಿರಿಕಿರಿ ಇಲ್ಲದೆ ಮನ ಬಂದಂತೆ ಎಡಕ್ಕೆ ತಿರುಗಬಹುದು. ಅಂತೆಯೇ ಕುಲಶೇಖರ ಕಡೆಯಿಂದ ಪಂಪ್ ವೆಲ್ ಕಡೆಗೆ ಎಡಕ್ಕೆ ತಿರುಗಬಹುದಾಗಿದೆ. ಪಂಪುವೆಲ್ ಕಡೆಯಿಂದ ಬಂದ ವಾಹನಗಳು ಎಡಕ್ಕೆ ತಿರುಗಿ ಮಲ್ಲಿಕಟ್ಟೆ ಕಡೆಗೆ ಮುಕ್ತವಾಗಿ ಸಂಚರಿಸಬಹುದಾಗಿದೆ.

ಈ ಮೇಲೆ ಹೆಸರಿಸಿದ ಎಲ್ಲಾ ಮುಕ್ತ ಎಡ ತಿರುವುಗಳಿಗೆ ಬಿಟುಮೆನ್ ಕಾಂಕ್ರೀಟ್ ಮೇಲ್ಮೈ ರಸ್ತೆ ನಿರ್ಮಾಣಗೊಂಡಿದೆ. ಆದುದರಿಂದ ನಂತೂರು ಜಂಕ್ಷನ್ ನಲ್ಲಿ ಇದು ವಾಹನದಟ್ಟನೆಯನ್ನು ಹೆಚ್ಚಾಗಿ ಬೆಳಿಗ್ಗೆ ಹಾಗೂ ಸಾಯಂಕಾಲ ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಮಲ್ಲಿಕಟ್ಟೆಯಿಂದ ಸುರತ್ಕಲ್ ಕಡೆಗೆ ಹೋಗುವ ರಸ್ತೆಗೆ ಮುಕ್ತ ಎಡ ತಿರುವು ಈಗಾಗಲೇ ಇತ್ತು.

ಡ್ರೈನೇಜ್ ಮತ್ತು ಸರ್ವಿಸ್ ರಸ್ತೆ ತಯಾರಿ :-  ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಭಜಕ ಯೋಜನೆಗೆ ಪೂರ್ವಸಿದ್ಧತಾ ಹಂತವಾಗಿ NH 66 ಮತ್ತು NH 75 ರ ಉದ್ದಕ್ಕೂ ಒಳಚರಂಡಿ ಕಾಮಗಾರಿಗಳನ್ನು ಪ್ರಾರಂಭಿಸಿದೆ. ಅಧಿಕಾರಿಯೊಬ್ಬರ ಪ್ರಕಾರ, ಶೋಲ್ಡರ್ ಡ್ರೈನ್ ನಿರ್ಮಾಣವು ಮಳೆಗಾಲದಲ್ಲಿ ಮುಂದುವರಿಯಬಹುದು ಮತ್ತು ಮಳೆಗಾಲದ ಅಂತ್ಯದ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಒಳಚರಂಡಿ ಕಾಮಗಾರಿಗಳು ಅಂತಿಮಗೊಂಡ ನಂತರ, ಮುಖ್ಯ ರಸ್ತೆಗಳಿಂದ ಸಂಚಾರವನ್ನು ಬೇರೆಡೆಗೆ ತಿರುಗಿಸಲು ಸರ್ವೀಸ್ ರಸ್ತೆಗಳನ್ನು ನಿರ್ಮಿಸಲು ಪ್ರಾಧಿಕಾರವು ಯೋಜಿಸಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page