August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನ್ಯಾಯಾಲಯದ ಚೇಂಬರ್ ನಲ್ಲಿದ್ದಾಗಲೇ ಹೃದಯಾಘಾತ – ನಿಧನರಾದ ನ್ಯಾಯಾಧೀಶರು

ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಮೂರನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ವಿಶ್ವನಾಥ್ ಮುಗುಟಿ ಹೃದಯಾಘಾತದಿಂದ ಮೃತರಾಗಿದ್ದಾರೆ.

44 ವರ್ಷದ ವಿಶ್ವನಾಥ್ ಮುಗುಟಿ 15 ದಿನಗಳ ಹಿಂದಷ್ಟೇ ಕಲಬುರ್ಗಿ ನ್ಯಾಯಾಲಯಕ್ಕೆ ವರ್ಗಾವಣೆಗೊಂಡು ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡಿದ್ದರು. ಜಿಲ್ಲಾ ಕೋರ್ಟ್ ಚೇಂಬರ್ ನಲ್ಲಿ ಇದ್ದ ಸಂದರ್ಭದಲ್ಲಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ ಅವರು ಕೊನೆಯುಸಿರು ಎಳೆದರು ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. ನ್ಯಾಯಾಧೀಶರಾದ ವಿಶ್ವನಾಥ್ ಅವರ ಅಗಲುವಿಕೆಗೆ ಜಿಲ್ಲಾ ವಕೀಲರ ಸಂಘ ತೀವ್ರ ಆಘಾತ ಮತ್ತು ಸಂತಾಪವನ್ನು ವ್ಯಕ್ತಪಡಿಸಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page