April 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಳೆಬಿಲ್ಲು ದಿನಾಚರಣೆ

ಬಜ್ಪೆಯಲ್ಲಿರುವ ಬೆಥನಿ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಜೂನ್ 18ರಂದು ಬುಧವಾರ ಕಿಂಡರ್ ಗಾರ್ಟನ್ ಮಕ್ಕಳು ಆಕಾಶದಲ್ಲಿ ಉಂಟಾಗುವ ಬಣ್ಣದ ಬೆಳಕಿನ  ಬಗ್ಗೆ  ಮಳೆಬಿಲ್ಲು ದಿನವನ್ನು ಆಚರಿಸುವುದರ ಮೂಲಕ ಸಂಭ್ರಮಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವಂದನೀಯ ವೀಣಾ ಡಿಸೋಜರವರು ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡು ಮುದ್ದು ಪುಟಾಣಿ ಮಕ್ಕಳಿಗೆ ಕಾಮನಬಿಲ್ಲು ಬಣ್ಣಗಳ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳ ಸಂತೋಷದಲ್ಲಿ ಮುಖ್ಯ ಶಿಕ್ಷಕರು ಹಾಗೂ ಕಿಂಡರ್ ಗಾರ್ಟನ್ ನ ಎಲ್ಲಾ ಶಿಕ್ಷಕರು ಭಾಗಿಯಾದರು.

ವಿದ್ಯಾರ್ಥಿಗಳು ಅದ್ಭುತವಾದ ಮಳೆಬಿಲ್ಲಿನ ವಿಷಯದ ಕರಕುಶಲ ವಸ್ತುಗಳೊಂದಿಗೆ ತಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಿದರು. ವರ್ಣರಂಜಿತ ಉಡುಪುಗಳನ್ನು ಧರಿಸಿ, ವಿವಿಧ ಬಣ್ಣಗಳಲ್ಲಿ ಹಣ್ಣುಗಳ ಶ್ರೇಣಿಯನ್ನು ವರ್ಣಿಸಿ ಕಾರ್ಯಕ್ರಮವನ್ನು ಚಂದಗಾಣಿಸಿದರು.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page