August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜಾತಿ ನಿಂದನೆ ಪ್ರಕರಣ – ಆರೋಪಿ ತಂದೆ ಮತ್ತು ಮಗ ದೋಷಮುಕ್ತ

ಪುತ್ತೂರಿನ ಪ್ರಖ್ಯಾತ ನ್ಯಾಯವಾದಿ ಮಹೇಶ್ ಕಜೆ ಮಂಡಿಸಿದ ವಾದ

ಜಾತಿ ನಿಂದನೆ ಆರೋಪ ಎದುರಿಸುತ್ತಿದ್ದ ನೆಲ್ಯಾಡಿ ನಿವಾಸಿಗಳಾದ ಗಣಪಯ್ಯ ಗೌಡ ಹಾಗೂ ಅವರ ಮಗ ಸೋಮಶೇಖರ ಗೌಡ ಎಂಬವರನ್ನು ದೋಷಮುಕ್ತಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶವನ್ನು ನೀಡಿದೆ. ನೆಲ್ಯಾಡಿ ಗ್ರಾಮದ ಮೇಲ್ಮಕ್ಕಿ ನಿವಾಸಿ ಅಣ್ಣು ಎಂಬುವರು 2017 ಫೆಬ್ರವರಿ 22ರಂದು ರಾತ್ರಿ ಮನೆಯಲ್ಲಿದ್ದ ಸಮಯ ನೆರೆ ಮನೆಯ ಗಣಪಯ್ಯ ಗೌಡ ಮತ್ತು ಅವರ ಮಗ ಸೋಮಶೇಖರ ಗೌಡರವರು ಏಕಾಏಕಿಯಾಗಿ ಅಣ್ಣು ಅವರ ಮನೆಯ ಅಂಗಳಕ್ಕೆ ಬಂದು ಅಣ್ಣು ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ಕೈ ಹಾಗೂ ಕತ್ತಿಯಿಂದ ಹಲ್ಲೆ ನಡೆಸಿ, ಜೀವ ಬೆದರಿಕೆಯನ್ನು ಒಡ್ಡಿದ್ದರು ಎಂದು ಆರೋಪಿಸಲಾಗಿತ್ತು.

ಗಾಯಗೊಂಡಿದ್ದ ಅಣ್ಣು ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಹಳೆ ದ್ವೇಷದಿಂದ ಈ ಕೃತ್ಯ ಎಸಗಲಾಗಿತ್ತು ಎಂದು ಆರೋಪಿಸಿ ಅಣ್ಣು ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಕೇಸನ್ನು ದಾಖಲಿಸಿಕೊಂಡು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗಳನ್ನು ದೋಷಮುಕ್ತಗೊಳಿಸಿ ಆದೇಶವನ್ನು ನೀಡಿದೆ. ಆರೋಪಿಗಳ ಪರ ಪುತ್ತೂರಿನ ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ ನ್ಯಾಯಾವಾದಿ ಮಹೇಶ್ ಕಜೆ ವಾದಿಸಿದ್ದರು.

 

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page