July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೋಮು ಗಲಭೆಗಳ ಸಂದರ್ಭಗಳಲ್ಲಿ ಉದ್ರಿಕ್ತ ಜನ ಸಮೂಹವನ್ನು ಚದುರಿಸಲು ವಿಶೇಷ ಕಾರ್ಯಪಡೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ತರಬೇತಿ

ಸಾಮಾಜಿಕ ಜಾಲತಾಣಗಳಲ್ಲಿ ತಾಂತ್ರಿಕ ನಿಗಾವಹಿಸುವ ಕುರಿತು ವಿಶೇಷ ತರಬೇತಿ

ಕಾನೂನು ಸುವ್ಯವಸ್ಥೆ, ಕೋಮು ಸೌಹರ್ದತೆ ಮತ್ತು ಶಾಂತಿ ವಾತವಾರಣವನ್ನು ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಉತ್ತಮ ಕಾರ್ಯಕ್ಷಮತೆಗಾಗಿ ಕೋಮು ಗಲಭೆಗಳ ಸಂಧರ್ಭಗಳಲಿ ಉದ್ರಿಕ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ Anti Riots gun & Stun Shell ನ್ನು ಉಪಯೋಗಿಸುವ ಬಗ್ಗೆ, ಜೂನ್ 02ರಂದು ಮಂಗಳೂರು ನಗರದ ನೆಹರೂ ಮೈದಾನದಲ್ಲಿ ತರಬೇತಿ ನೀಡಿ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು ಎಂದು ವಿಶೇಷ ಕಾರ್ಯಪಡೆಯ ಡಿಐಜಿ ಅವರು ತಿಳಿಸಿದ್ದಾರೆ.

ಈ ತರಬೇತಿ ಮತ್ತು ಪ್ರಾತ್ಯಕ್ಷಕೆಯಲ್ಲಿ ದಕ್ಷಿಣ ಕನ್ನಡ ಸೇರಿ ಮೂರು ಜಿಲ್ಲೆಗಳ ವಿಶೇಷ ಕಾರ್ಯಪಡೆ ಘಟಕದ 95 ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ. ಅಲ್ಲದೇ ಗುಪ್ತಚರ ವಿಭಾಗದ ಕೆಲವು ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಗುಪ್ತಚರ ಮಾಹಿತಿಯನ್ನು ಸಂಗ್ರಹಿಸುವ ಬಗ್ಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುವ ದ್ವೇಷ ಭಾಷಣ ಮುಂತಾದ ಮಾಹಿತಿಗಳನ್ನು ಸಂಗ್ರಹಿಸುವ ಕುರಿತು ಪರಿಣಾಮಕಾರಿಯಾಗಿ ತರಬೇತಿಯನ್ನು ನೀಡಲಾಗಿದ್ದು, ಕಾರ್ಯಪ್ರವೃತ್ತಿಗೆ ಸನ್ನದ್ದರಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಹೇಳಿದರು.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page