August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತುಳು ರಂಗಭೂಮಿ ಕಲಾವಿದ ಮಾಣಿ ಕಾಪಿಕಾಡು ನಿವಾಸಿ ಮೌನೇಶ ಆಚಾರ್ಯ ಇನ್ನಿಲ್ಲ

ಪ್ರತಿಭಾನ್ವಿತ ಯುವಕ, ತುಳುರಂಗಭೂಮಿ‌ ಕಲಾವಿದ, ಮಾಣಿ ಕಾಪಿಕಾಡು‌ ನಿವಾಸಿ 44 ವರ್ಷ ಪ್ರಾಯದ ಮೌನೇಶ ಆಚಾರ್ಯ ಮಾಣಿ ಇವರು ಇಂದು ಜುಲಾಯ್ 15ರಂದು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸ‌ಮಾಡುತ್ತಿದ್ದ ಇವರು ಜೊತೆಗೆ ಮನೆ ಸಮೀಪವೇ ಚಿಕ್ಕ‌ ದಿನಸಿ‌ ಅಂಗಡಿ ನಡೆಸುತ್ತಿದ್ದರು. ಹಾಸ್ಯಪ್ರಜ್ಞೆ ಉಳ್ಳವರಾಗಿದ್ದ ಇವರು ಜಯಂ ಕಲಾನಿಕೇತನ ಮಾಣಿ ನೃತ್ಯ ತಂಡದಲ್ಲಿ ಕಲಾವಿದರಾಗಿದ್ದ ಇವರು ಕಲಾಮಾತೆ ನಾಗನವಳಚ್ಚಿಲ್ ತಂಡದ ಕಲಾವಿದರಾಗಿದ್ದು, ಶಾಂತರಾಮ್ ಕಲ್ಲಡ್ಕ ನಿರ್ದೇಶನದ ತುಳು ಅಪ್ಪೆಜೋಕ್ಲು ಕಲಾ ಬಳಗದ ನಾಟಕಗಳಲ್ಲಿಯೂ ಅಭಿನಯಿಸಿದ್ದರು.‌

ಪ್ರಸ್ತುತ ನಮ್ಮ‌ಕಲಾವಿದರು ನೆಲ್ಯಾಡಿ ತುಳುನಾಟಕ ತಂಡದ ಕಲಾವಿದರಾಗಿದ್ದ ಇವರು, ಯುವ ಕಲಾವಿದ ಸಚಿನ್ ಮಾಣಿಯವರ ಹಲವು ಹಾಸ್ಯ ವಿಡಿಯೋಗಳಲ್ಲಿ ಅಭಿನಯಿಸಿದವರು. ಸ್ನೇಹಜೀವಿಯಾಗಿದ್ದ ಇವರ ಅಗಲಿಕೆ ಗ್ರಾಮದಲ್ಲಿ ಆಘಾತಕ್ಕೆ ಕಾರಣವಾಗಿದೆ. ಮೃತರು ತಾಯಿ, ಸಹೋದರ, ಪತ್ನಿ, ಪುಟ್ಟಮಗಳು ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page