August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ ಆಯ್ಕೆ

ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ ಬದಿಗುಡ್ಡೆ ಇವರು ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿ, ಜಿಲ್ಲೆಯ ಹಲವು ದೈವಸ್ಥಾನ ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಜವಾಬ್ದಾರಿಯನ್ನು ವಹಿಸಿಕೊಂಡು, ಧಾರ್ಮಿಕವಾಗಿ ಸಾಮಾಜಿಕವಾಗಿ ಜನಾನುರಾಗಿಯಾಗಿರುತ್ತಾರೆ ಮಾತ್ರವಲ್ಲದೆ ಪ್ರಗತಿಪರ ಕೃಷಿಕರೂ ಆಗಿದ್ದಾರೆ.

ಉಪಾಧ್ಯಕ್ಷರಾಗಿ ಐತಪ್ಪ ಬಿ.ಸಿ. ರೋಡ್, ಕಾರ್ಯದರ್ಶಿಯಾಗಿ ಸದಾನಂದ ಆಳ್ವ, ಜೊತೆ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಶೆಟ್ಟಿ ಸಜಿಪ, ಕೋಶಾಧಿಕಾರಿಯಾಗಿ ಲೋಕೆಶ್ ಶೆಟ್ಟಿ ಕುಳ, ಜೊತೆ ಕೋಶಾಧಿಕಾರಿಯಾಗಿ ಶ್ರೀವಿದ್ಯಾ ರೈ ಬಿ.ಸಿ. ರೋಡ್ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ಆಯ್ಕೆಯ ಸಭೆಯು ತಾಲೂಕು ಬಂಟರ ಭವನದ ಸಭಾಂಗಣದಲ್ಲಿ ನಡೆಯಿತು.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಕಿರಣ್ ಹೆಗ್ಡೆ ಅನಂತಾಡಿ, ವಿವೇಕ್ ಶೆಟ್ಟಿ ನಗ್ರಿಗುತ್ತು, ಲೋಕನಾಥ ಶೆಟ್ಟಿ ಬಿ.ಸಿ. ರೋಡ್, ಶಾಂತರಾಮ ಶೆಟ್ಟಿ ಬೋಳಂತೂರು ನಡೆಸಿಕೊಟ್ಟರು. ಸಂಘದ ಅಧ್ಯಕ್ಷ ಚಂಡ್ರಹಾಸ ಶೆಟ್ಟಿ ರಂಗೋಲಿ, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page