May 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೋಕಾಲಿ ಆಟವಾಡುತ್ತಿದ್ದಾಗ ಉಸಿರುಗಟ್ಟಿ 13 ವರ್ಷದ ಬಾಲಕಿಯ ದಾರುಣ ಅಂತ್ಯ

ಭಟ್ಕಳ ತಾಲೂಕಿನ ತೆರ್ನಮಕ್ಕಿ ಸಭಾತಿ ಗ್ರಾಮದಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು 13 ವರ್ಷದ ಬಾಲಕಿ ದಾರುಣವಾಗಿ ಉಸಿರುಗಟ್ಟಿ ಸಾವನ್ನಪ್ಪಿದ ದುರ್ಘಟನೆ ಜುಲಾಯ್ 17ರಂದು ಗುರುವಾರ ನಡೆದಿದೆ. ಮೃತ ಬಾಲಕಿ ಪ್ರಣೀತ ಜಗನ್ನಾಥ ನಾಯ್ಕ ಎಂದು ಗುರುತಿಸಲಾಗಿದ್ದು ಈಕೆ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಘಟನೆಯ ದಿನ ಶಾಲೆಗೆ ಮಳೆಯ ಕಾರಣದಿಂದ ರಜೆ ಇದ್ದ ಕಾರಣ, ಪ್ರಣೀತ ತನ್ನ ಸಹೋದರಿಯೊಂದಿಗೆ ಮನೆಯ ಬಳಿ ಜೋಕಾಲಿಯಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಜೋಕಾಲಿಯ ಹಗ್ಗ ತಲೆ ಮತ್ತು ಕುತ್ತಿಗೆಗೆ ಸುತ್ತಿಕೊಂಡು ತೀವ್ರ ಗಂಭೀರ ಪರಿಸ್ಥಿತಿ ಉಂಟಾಗಿದೆ. ಸಹಾಯಕ್ಕಾಗಿ ಕೂಗುವಷ್ಟರಲ್ಲಿ ಉಸಿರುಗಟ್ಟಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಘಟನೆಯ ಸಮಯದಲ್ಲಿ ತಾಯಿ ಕೆಲಸಕ್ಕೆ ಹೋಗಿದ್ದ ಕಾರಣ ತಕ್ಷಣ ಯಾವುದೇ ಸಹಾಯ ಲಭ್ಯವಾಗಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ. ಘಟನೆಯ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗ್ರಾಮದ ಜನರಲ್ಲಿ ಈ ದುರ್ಘಟನೆ ಆಘಾತ ಮೂಡಿಸಿದ್ದು, ಎಲ್ಲಾ ಕಡೆ ದುಃಖದ ವಾತಾವರಣ ನಿರ್ಮಾಣವಾಗಿದೆ.

You may also like

News

ದ್ವಿತೀಯ ಪಿಯುಸಿ ಫಲಿತಾಂಶ – ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿಗೆ ಶೇ. 98.05 ಯಶಸ್ಸು

ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಪ್ರಾಂಶುಪಾಲರಾದ ಭಗಿನಿ ನೊರಿನ್ ಡಿಸೋಜ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮಂಗಳೂರು ನಗರದ ಪ್ರತಿಷ್ಠಿತ ಸೈಂಟ್
News

ಧರ್ಮಸ್ಥಳದಲ್ಲಿ 54ನೇ ವರ್ಷದ ಸಾಮೂಹಿಕ ವಿವಾಹ – 106 ಜೋಡಿಗಳ ದಾಂಪತ್ಯ ಆರಂಭ

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 29ರಂದು ಬುಧವಾರ ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ

You cannot copy content of this page