May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಂಡರ್ ಗಾರ್ಟನ್ ಮಕ್ಕಳೊಂದಿಗೆ ಪರಿಸರ ಹಾಗೂ ಹಸಿರು ದಿನ ಆಚರಣೆ

ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಂಡರ್ ಗಾರ್ಟನ್ (ಕೆ.ಜಿ.) ವಿಭಾಗದ ಮಕ್ಕಳೊಂದಿಗೆ ಪರಿಸರ ದಿನ ಹಾಗೂ ಹಸಿರು ದಿನವನ್ನು ಜುಲಾಯ್ 21ರಂದು ಸೋಮವಾರ ಉತ್ಸಾಹಭರಿತವಾಗಿ ಆಚರಿಸಲಾಯಿತು.

ಈ ವಿಶೇಷ ದಿನದ ಅಂಗವಾಗಿ ಮಕ್ಕಳು ಹಸಿರು ಬಟ್ಟೆ ಧರಿಸಿ, ಹಸಿರು ಸಸ್ಯಗಳನ್ನು ನೆಟ್ಟು ಪರಿಸರದ ಮಹತ್ವವನ್ನು ಅರಿತುಕೊಂಡರು. ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಚೈತ್ರರವರು ಮಾತನಾಡಿ, “ಪರಿಸರವನ್ನು ಉಳಿಸುವುದು ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ಕಟ್ಟುವ ಮೊದಲ ಹೆಜ್ಜೆ. ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ಪರಿಸರ ಅರಿವು ಮೂಡುವುದು ಆಶಾಸ್ಪದವಾಗಿದೆ” ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಶಾಲಾ ಮುಖ್ಯ ಶಿಕ್ಷಕಿ ವಂದನೀಯ ಭಗಿನಿ ವೀಣಾ ಡಿಸೋಜರವರು ಮಕ್ಕಳಿಗೆ ಪರಿಸರ ಸಂರಕ್ಷಣೆ, ಗಿಡಗಳ ಮಹತ್ವ ಮತ್ತು ಪ್ರಕೃತಿಯ ಕುರಿತಾದ ವಿಷಯದ ಬಗ್ಗೆ ತಿಳಿವು ನೀಡಿದರು. ವಿವಿಧ ಚಟುವಟಿಕೆಗಳು ಮತ್ತು ನೃತ್ಯಗಳ ಮೂಲಕ ಮಕ್ಕಳು ತಮ್ಮ ಸೃಜನ ಶೀಲತೆಯನ್ನು ಪ್ರದರ್ಶಿಸಿದರು. ಮುಖ್ಯ ಶಿಕ್ಷಕರು ನೀಡಿದ ಚಟುವಟಿಕೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾಗಳನ್ನು ಕೊಟ್ಟು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ವಿದ್ಯಾರ್ಥಿಗಳು ಹಾಗೂ ಕೆ.ಜಿ. ಶಿಕ್ಷಕರು ಈ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page