July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಂಡರ್ ಗಾರ್ಟನ್ ಮಕ್ಕಳೊಂದಿಗೆ ಪರಿಸರ ಹಾಗೂ ಹಸಿರು ದಿನ ಆಚರಣೆ

ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಂಡರ್ ಗಾರ್ಟನ್ (ಕೆ.ಜಿ.) ವಿಭಾಗದ ಮಕ್ಕಳೊಂದಿಗೆ ಪರಿಸರ ದಿನ ಹಾಗೂ ಹಸಿರು ದಿನವನ್ನು ಜುಲಾಯ್ 21ರಂದು ಸೋಮವಾರ ಉತ್ಸಾಹಭರಿತವಾಗಿ ಆಚರಿಸಲಾಯಿತು.

ಈ ವಿಶೇಷ ದಿನದ ಅಂಗವಾಗಿ ಮಕ್ಕಳು ಹಸಿರು ಬಟ್ಟೆ ಧರಿಸಿ, ಹಸಿರು ಸಸ್ಯಗಳನ್ನು ನೆಟ್ಟು ಪರಿಸರದ ಮಹತ್ವವನ್ನು ಅರಿತುಕೊಂಡರು. ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಚೈತ್ರರವರು ಮಾತನಾಡಿ, “ಪರಿಸರವನ್ನು ಉಳಿಸುವುದು ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ಕಟ್ಟುವ ಮೊದಲ ಹೆಜ್ಜೆ. ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ಪರಿಸರ ಅರಿವು ಮೂಡುವುದು ಆಶಾಸ್ಪದವಾಗಿದೆ” ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಶಾಲಾ ಮುಖ್ಯ ಶಿಕ್ಷಕಿ ವಂದನೀಯ ಭಗಿನಿ ವೀಣಾ ಡಿಸೋಜರವರು ಮಕ್ಕಳಿಗೆ ಪರಿಸರ ಸಂರಕ್ಷಣೆ, ಗಿಡಗಳ ಮಹತ್ವ ಮತ್ತು ಪ್ರಕೃತಿಯ ಕುರಿತಾದ ವಿಷಯದ ಬಗ್ಗೆ ತಿಳಿವು ನೀಡಿದರು. ವಿವಿಧ ಚಟುವಟಿಕೆಗಳು ಮತ್ತು ನೃತ್ಯಗಳ ಮೂಲಕ ಮಕ್ಕಳು ತಮ್ಮ ಸೃಜನ ಶೀಲತೆಯನ್ನು ಪ್ರದರ್ಶಿಸಿದರು. ಮುಖ್ಯ ಶಿಕ್ಷಕರು ನೀಡಿದ ಚಟುವಟಿಕೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾಗಳನ್ನು ಕೊಟ್ಟು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ವಿದ್ಯಾರ್ಥಿಗಳು ಹಾಗೂ ಕೆ.ಜಿ. ಶಿಕ್ಷಕರು ಈ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page