May 6, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತಾಕೊಡೆಯಲ್ಲಿ ಮಹಿಳೆಯರಿಗಾಗಿ 5 ದಿವಸಗಳ ಕೌಶಲ್ಯ ತರಬೇತಿಯ ಉದ್ಘಾಟನೆ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಒಫ್ ಬರೋಡ ಮೂಡಬಿದ್ರಿ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಪವಿತ್ರ ಶಿಲುಬೆಯ ದೇವಾಲಯ ತಾಕೊಡೆ  ಹಾಗೂ ಸ್ತ್ರೀ ಸಂಘಟನೆ ತಾಕೊಡೆ ಘಟಕ ಇವರ ಜಂಟಿ ಆಶ್ರಯದಲ್ಲಿ ಆಗಸ್ಟ್ 4 ಸೋಮವಾರದಿಂದ ಆಗಸ್ಟ್ 8 ಗುರುವಾರದ ತನಕ 5 ದಿವಸಗಳ ಸೀರೆಗೆ ಗೊಂಡೆ ಹಾಕುವ ಕೌಶಲ್ಯ ತರಬೇತಿಯ ಉದ್ಘಾಟನಾ ಸಮಾರಂಭ ತಾಕೊಡೆ ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಮೊದಲಿಗೆ ಮಹಿಳೆಯರು ಪ್ರಾರ್ಥನಾ ಗೀತೆ ಹಾಡಿ ದೇವರ ಅನುಗ್ರಹ ಬೇಡಿದರು. ನಂತರ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಯೋತಿ ರಾಜ್ ರವರು ಕಾರ್ಯಕ್ರಮ ಉದ್ಘಾಟನೆ ಮಾಡಿ ಮಹಿಳೆಯರು  ತರಬೇತಿಯಿಂದ ಕೌಶಲ್ಯ   ಕಲಿತು  ಸ್ವಾವಲಂಬನೆ ಜೀವನ ಸಾಗಿಸಲು ಪ್ರಯತ್ನ ಪಡಬೇಕು, ಬ್ಯಾಂಕ್ ಗಳು ಸ್ವ ಉದ್ಯೋಗ ಮಾಡಲು ಸಾಲ ಸೌಲಭ್ಯ ನೀಡುತ್ತದೆ. ಎಲ್ಲರೂ ಇದರ ಪ್ರಯೋಜನ ಪಡೆಯಲು ಕರೆ ನೀಡಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದ ಕಾರ್ಯಕ್ರಮ ವ್ಯವಸ್ತಾಪಕರಾದ ಜೀವನ್ ಕೊಲ್ಯ ಮಾತನಾಡಿ ಮಹಿಳೆಯರು ಸ್ವ ಉದ್ಯೋಗ ತರಬೇತಿಯ ಪ್ರಯೋಜನ ಪಡೆದು ಸಣ್ಣ ಸಣ್ಣ ಉದ್ದಿಮೆ ಪ್ರಾರಂಭ ಮಾಡಿ ಉಳಿತಾಯ ಮಾಡಿ ಯಶಸ್ಸು ಗಳಿಸಲು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಾಕೊಡೆ ದೇವಾಲಯದ ಧರ್ಮ ಗುರುಗಳಾದ ವಂದನೀಯ ಫಾದರ್ ರೋಹನ್ ಲೋಬೊ ಮಾತನಾಡುತ್ತಾ ಸ್ವ ಉದ್ಯೋಗ ತರಬೇತಿಯಿಂದ ಮಹಿಳೆಯರು ಉತ್ತಮ ಜೀವನ ನಡೆಸಲು ಸಾಧ್ಯವಿದೆ, ಇಂಥ ತರಬೇತಿಗಳಿಗೆ ನಮ್ಮ ಸದಾ ಬೆಂಬಲವಿದೆ ಎಂದು ತಿಳಿಸಿ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಶುಭ ಕೋರಿದರು. ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಆಲ್ವಿನ್ ಪಿಂಟೋ, ಆಯೋಗಗಳ ಸಂಯೋಜಕ ಪಾವ್ಲ್ ಡಿಸೋಜ, ಬೆಥೆನಿ ಕಾನ್ವೆಂಟ್ ಸುಪೀರಿಯರ್ ಭಗಿನಿ ರೀನಾ, ತರಬೇತುದಾರ ಶುಭ ಲಕ್ಷ್ಮೀ ಮೂಡಬಿದಿರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ತ್ರೀ ಸಂಘಟನೆ ಅಧ್ಯಕ್ಷೆ ಐವಿ ಕ್ರಾಸ್ತ ಸ್ವಾಗತಿಸಿ, ಸಹ ಕಾರ್ಯದರ್ಶಿ ಶೆರಿ ನಜೆರೆತ್ ಧನ್ಯವಾದಗೈದರು. ಲೀಜಾ ರೊಡ್ರಿಗಸ್  ಕಾರ್ಯಕ್ರಮ ನಿರೂಪಿಸಿದರು. 30 ಮಹಿಳೆಯರು 5 ದಿನದ ತರಬೇತಿಯಲ್ಲಿ ಭಾಗವಹಿಸುತ್ತಿದ್ದಾರೆ.

You may also like

News

ಸಾಹಿತ್ಯ ಸಂಭ್ರಮ – ಮೇ 10ರಂದು ವಲ್ಲಿ ವಗ್ಗ ಅವರ ‘ವಿಂಚ್ಣಾರ್ ಕಾಣಿಯೊ’ ಕೃತಿ ಲೋಕಾರ್ಪಣೆ

ಕೊಂಕಣಿ ಸಾಹಿತ್ಯ ಲೋಕದ ಹಿರಿಯ ಸಾಹಿತಿ ವಲ್ಲಿ ವಗ್ಗ (ವಲೇರಿಯನ್ ಡಿಸೋಜ) ಅವರ ಬಹುನಿರೀಕ್ಷಿತ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆಗೆ ಸಜ್ಜಾಗಿದೆ. ಈ ಪುಸ್ತಕ ಲೋಕಾರ್ಪಣೆ
News

ಮುಕ್ಕ ಚೇಳ್ಯಾರು ಸಂತ ಜೋಸೆಫ್ ಪ್ರಾರ್ಥನಾ ಮಂದಿರದ ದಶಮಾನೋತ್ಸವ ಹಾಗೂ ವಾರ್ಷಿಕೋತ್ಸವ ಸಂಭ್ರಮ

“ಪ್ರಾರ್ಥನಾ ಮಂದಿರಗಳು ಮನುಷ್ಯರಲ್ಲಿ ಪ್ರೀತಿಯನ್ನು ಬಿತ್ತಬೇಕು” – ಡಾ| ಗಣೇಶ್ ಅಮಿನ್ ಸಂಕಮಾರ್ ಕಥೋಲಿಕ ತೈಲಾಗಾರ ನಿರ್ವಸಿತರ ಅಭಿವೃದ್ಧಿ ಸಮಿತಿ (ರಿ.) ಮುಕ್ಕ ಚೇಳ್ಯಾರು ಇದರ ಆಶ್ರಯದಲ್ಲಿ,

You cannot copy content of this page